ಹಾಸನ: ಇತ್ತೀಚೆಗೆ ನಿಧನರಾದ ಜಿಲ್ಲೆಯ ಪ್ರಗತಿಪರ ರೈತ, ಪರಸರ ಪ್ರೇಮಿ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕೃಷಿ ಪ್ರಶಸ್ತಿ ಪುರಸ್ಕೃತರಾದ ದೊಡ್ಡಮಗ್ಗೆಯ ಎಂ.ಜಿ.ತಿಮ್ಮೇಗೌಡರ ಉತ್ತರಾಧಿಕಾರ್ಯ ಏ.23ರಂದು ನಡೆಯಲಿದ್ದು, ಈ ಕಾರ್ಯದಲ್ಲಿ ಗಿಡಗಳನ್ನು ವಿತರಿಸಲು ಕುಟುಂಬ ವರ್ಗ ತೀರ್ಮಾನಿಸಿದೆ.
ಹಾಗೆ ನೋಡಿದರೆ ಪ್ರಗತಿ ಪರ ರೈತರಾಗಿದ್ದ ದಿ. ಎಂ.ಜೆ.ತಿಮ್ಮೇಗೌಡರವರು ಮಣ್ಣಿನ ಮಡಿಲಲ್ಲಿ ಮಮತೆಯಿಂದ ದುಡಿದವರು. ಆಧುನಿಕ ತಂತ್ರಜ್ಞಾನ ಬಳಸಿ ಮಣ್ಣಿನ ಫಲವತ್ತತೆಗೆ ಅನುಗುಣವಾಗಿ ಸೂಕ್ತ ಬೆಳೆಗಳನ್ನು ಬೆಳೆದು ಯಶಸ್ಸು ಕಂಡಿದ್ದರು. ಇವರ ಕೃಷಿ ಸಾಧನೆಗಾಗಿ ಹಲವು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಅರಸಿ ಬಂದಿದೆ. 2003ರಲ್ಲಿ ಕೇಂದ್ರ ಸರ್ಕಾರದಿಂದ ತಂಬಾಕು ಬೆಳೆಗೆ ಬೆಸ್ಟ್ ಗ್ರೋವರ್ ಪ್ರಶಸ್ತಿ, 2005ರಲ್ಲಿ ಬೆಂಗಳೂರಿನಲ್ಲಿ ನಡೆದ ಸುವರ್ಣ ಕರ್ನಾಟಕ ಕೃಷಿ ಮೇಳದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ, 2009 ರಲ್ಲಿ ಬೆಂಗಳೂರಿನಲ್ಲಿ ನಡೆದ ಹೈನುಗಾರಿಕೆ ಸಮ್ಮೇಳನದಲ್ಲಿ ಜಿಲ್ಲೆಯ ಉತ್ತಮ ಹೈನುಗಾರಿಕಾ ರೈತ ಪ್ರಶಸ್ತಿ ಬಂದಿದೆ.
ಇವರು ಕೃಷಿ ಭೂಮಿಯಲ್ಲಿ ಶ್ರೀಗಂಧ, ಸಪೋಟ, ಹೆಬ್ಬೇವು, ಸಿಲ್ವರ್, ಅಡಿಕೆ, ತೆಂಗು, ಮಾವು, ಬಾಳೆ, ಏಲಕ್ಕಿ, ತಾಳೆ, ಜಾಯಿಕಾಯಿ ಹಾಗೂ ವೆನಿಲ್ಲಾ ಬೆಳೆಯನ್ನು ಬೆಳೆದಿದ್ದಾರೆ. ಎರಡು ಲಕ್ಷಕ್ಕೂ ಹೆಚ್ಚು ವೃಕ್ಷ ಸಮೂಹ ವನ್ನು ಸೃಷ್ಟಿಸಿರುವ ಕೀರ್ತಿಯೂ ಇವರಿಗಿದೆ. ವಾಸದ ಮನೆ ಲಕ್ಮ್ಷಿ ಫಾರ್ಮ್ಸನ ಒಳ ಹೋದರೆ ಅಲ್ಲಿ ಸಸ್ಯಲೋಕವೇ ಸೃಷ್ಟಿಯಾಗಿರುವುದು ಗೋಚರಿಸುತ್ತದೆ.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…