News Karnataka Kannada
Sunday, May 12 2024
ಕರ್ನಾಟಕ

ತುಮಕೂರಿನಲ್ಲಿ ಚಿರತೆ ಪ್ರತ್ಯಕ್ಷ: ಅರಣ್ಯ ಸಿಬ್ಬಂದಿಯಿಂದ ಸೆರೆಹಿಡಿಯುವಲ್ಲಿ ಯಶಸ್ವಿ

Photo Credit :

ತುಮಕೂರಿನಲ್ಲಿ ಚಿರತೆ ಪ್ರತ್ಯಕ್ಷ: ಅರಣ್ಯ ಸಿಬ್ಬಂದಿಯಿಂದ ಸೆರೆಹಿಡಿಯುವಲ್ಲಿ ಯಶಸ್ವಿ

ತುಮಕೂರು: ತುಮಕೂರಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಕೆಲಕಾಲ ಜನರಲ್ಲಿ ಆತಂಕದ ಸ್ಥಿತಿ ಮೂಡಿಚಿತ್ತು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಚರಣೆಯಲ್ಲಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.


ತುಮಕೂರಿನ ಹನುಮಂತನಗರದಲ್ಲಿ ಗಂಗಣ್ಣ ಎಂಬವರ ಮನೆಯ ಕಾಂಪೌಂಡ್‍ನಲ್ಲಿ ಭಾನುವಾರ ಚಿರತೆಯೊಂದು ಕಾಣಿಸಿಕೊಂಡಿದ್ದು, ಕೆಲಕಾಲ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಚಿರತೆಗೆ ಅರವಳಿಕೆ ಚುಚ್ಚುಮದ್ದು ಕೊಟ್ಟು ಸೆರೆ ಹಿಡಿಯಲು ಮುಂದಾದರು. ಚಿರತೆಯನ್ನು ಹಿಡಿಯುವಲ್ಲಿ ಸಿಬ್ಬಂದಿ ಯಸಸ್ವಿಯಾಗಿದ್ದರು. ಆದರೆ ಸೆರೆ ಸಿಕ್ಕ ನಂತರವೂ ಆ ಚಿರತೆ ಮತ್ತೆ ಪರಾರಿಯಾಗಿತ್ತು. ಈ ವೇಳೆ ಆ ಚಿರತೆಗೆ ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಹುಲ್ಲು ತಿನ್ನಿಸಲು ಹೋಗಿ ಅರಣ್ಯ ಸಿಬ್ಬಂದಿಯಿಂದ ಸರಿಯಾಗಿ ಗೂಸಾ ತಿಂದಿದ್ದ. ಪರಾರಿಯಾಗಿದ್ದ ಚಿರತೆಗೆ ಮತ್ತೆ ಬಲೆ ಬೀಸಿದ ಅರಣ್ಯ ಸಿಬ್ಬಂದಿ ಚಿರತೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು