News Karnataka Kannada
Saturday, April 27 2024
ಕರ್ನಾಟಕ

‘ತೇಜಸ್‌’ ಯುದ್ಧ ವಿಮಾನದಲ್ಲಿ ಕುಳಿತ ವೆಂಕಯ್ಯ ನಾಯ್ಡು

Venkaiah Naidu
Photo Credit :

ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಎಚ್‌ಎಎಲ್‌ಗೆ ಶುಕ್ರವಾರ ಭೇಟಿ ನೀಡಿ ವೈಮಾನಿಕ ಮತ್ತು ರಕ್ಷಣಾ ಸೌಲಭ್ಯಗಳನ್ನು ವೀಕ್ಷಿಸಿ, ಬಳಿಕ ‘ತೇಜಸ್‌’ ಯುದ್ಧ ವಿಮಾನದ ಕಾಕ್‌ಪಿಟ್‌ನಲ್ಲಿ ಕುಳಿತು ಅದರ ಮಾಹಿತಿ ಪಡೆದರು.

ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಇಲ್ಲಿನ ವೈಮಾನಿಕ ಮತ್ತು ರಕ್ಷಣಾ ವ್ಯವಸ್ಥೆಯ ಮೂಲಸೌಕರ್ಯಗಳನ್ನು ನೋಡಿದ ಬಳಿಕ ದೇಶದ ಸುರಕ್ಷತೆ ಮತ್ತು ಭದ್ರತೆಯ ಖಾತರಿಯಾಗಿದೆ ಎಂದರು.

’ಎಚ್‌ಎಎಲ್‌ನ ಹಲವು ಯೋಜನೆಗಳು ಖಾಸಗಿ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, ದೇಶಿಯವಾಗಿ ಅತ್ಯಾಧುನಿಕ ಜಾಗತಿಕ ಮಟ್ಟದ ತಂತ್ರಜ್ಞಾನ ಅಭಿವೃದ್ಧಿ ಆಗುತ್ತದೆ ಎಂಬ ವಿಶ್ವಾಸವಿದೆ. ಇದರಿಂದ ನಮ್ಮ ದೇಶದ ಸೇನಾ ವ್ಯವಸ್ಥೆಗೆ ಹೆಚ್ಚಿನ ಬಲ ಬರುತ್ತದೆ’ ಎಂದು ವೆಂಕಯ್ಯನಾಯ್ಡು ಹೇಳಿದರು.
ರಾಜ್ಯಪಾಲ ಥಾವರ್ ಚಂದ್‌ ಗೆಹಲೋತ್‌ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು