News Karnataka Kannada
Friday, May 03 2024
ಕರ್ನಾಟಕ

ದುರ್ಬಲಗೊಂಡ ಮುಂಗಾರು, ಸಾಧಾರಣ ಮಳೆ ಮುಂದುವರಿಕೆ

Rain
Photo Credit :

ಬೆಂಗಳೂರು, – ರಾಜ್ಯ ದಲ್ಲಿ ನೈಋತ್ಯ ಮುಂಗಾರು ದುರ್ಬಲ ಗೊಂಡಿದ್ದು, ಒಳನಾಡಿನಲ್ಲಿ ಚದುರಿ ದಂತೆ ಸಾಧಾರಣ ಮಳೆ ಮುಂದು ವರಿಯುವ ಮುನ್ಸೂಚನೆಗಳಿವೆ. ಜೂನ್ ಹಾಗೂ ಜುಲೈನಲ್ಲಿ ಉತ್ತಮ ಮಳೆಯಾಗಿತ್ತು. ಆದರೆ, ಆಗಸ್ಟ್ 1 ರಿಂದ 10ರ ಅವಧಿಯಲ್ಲಿ ಮುಂಗಾರು ಕ್ಷೀಣಗೊಂಡಿದೆ. ಈ ಅವಧಿಯಲ್ಲಿ ರಾಜ್ಯದಲ್ಲಿ ಶೇ.42ರಷ್ಟು ಮಳೆ ಕೊರತೆ ಉಂಟಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಆ.1 ರಿಂದ 10ರ ನಡುವಿನ ಅವಧಿಯಲ್ಲಿ 83 ಮಿಲಿ ಮೀಟರ್ ವಾಡಿಕೆ ಪ್ರಮಾಣದ ಮಳೆಯಾಗಿದ್ದು, ಕೇವಲ 48 ಮಿಮೀನಷ್ಟು ಮಾತ್ರ ಮಳೆಯಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕೊರತೆ ಉಂಟಾಗಿದೆ. ಜೂನ್ 1 ರಿಂದ ಆ.10ರ ನಡುವಿನ ಅವಧಿಯಲ್ಲೂ ರಾಜ್ಯದಲ್ಲಿ ಶೇ.3ರಷ್ಟು ಮಳೆ ಕೊರತೆ ಕಂಡುಬಂದಿದೆ.
ಈ ಅವಧಿಯಲ್ಲಿ 553 ಮಿಲಿ ಮೀಟರ್ ವಾಡಿಕೆ ಮಳೆಯಾಗಿದ್ದು, 536 ಮಿಲಿ ಮೀಟರ್‍ನಷ್ಟು ಮಾತ್ರ ಮಳೆ ಬಿದ್ದ ವರದಿಯಾಗಿದೆ. ಆದರೆ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದರೆ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದ ಮಳೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು