ಮದ್ದೂರು: ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಅನೈತಿಕ ವಿಷಯಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಚನ್ನಪಟ್ಟಣ ತಾಲೂಕು ಕುಕ್ಕೂರುದೊಡ್ಡಿ ಗ್ರಾಮದ ರಾಕೇಶ್ ಆಲಿಯಾಸ್ ರಾಖಿ(25) ಕೊಲೆಯಾದ ದುರ್ದೈವಿ. ಈತ ವಡ್ಡರದೊಡ್ಡಿಗೆ ಬೈಕ್ನಲ್ಲಿ ಹೋಗುವಾಗ ಎರಡು ಬೈಕ್ನಲ್ಲಿ ಬಂದ ಮೂರರಿಂದ ನಾಲ್ಕು ಜನರಿದ್ದ ಯುವಕರು ಈ ಕೃತ್ಯ ಎಸೆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.