News Karnataka Kannada
Monday, April 29 2024
ಕರ್ನಾಟಕ

ದೆಹಲಿಗೆ ತೆರಳಿದ ಅಸಮಾಧಾನಿತ ಸಚಿವ ಸಿ ಪಿ ಯೋಗೇಶ್ವರ್‌

Yogeshwar Ramnagar 17 6 21 No176215 1 Newsk 6126965300
Photo Credit :

ನವದೆಹಲಿ: ನೂತನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಸ್ಥಾನ ದೊರಕದೇ ಅಸಮಾಧಾನಿತರಾಗಿರುವ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು ದೆಹಲಿಗೆ ತೆರಳಿದ್ದಾರೆ.
ಸಚಿವ ಸ್ಥಾನ ಕೈ ತಪ್ಪಿದ ಬಳಿಕ ಮೊದಲ ಬಾರಿಗೆ ದೆಹಲಿಗೆ ಬಂದಿರುವ ಸಿ.ಪಿ ಯೋಗೇಶ್ವರ್, ಕರ್ನಾಟಕ ಭವನದಲ್ಲಿದ್ದಾರೆ. ಅವರು ಹೈಕಮಾಂಡ್ ನಾಯಕರ ಭೇಟಿಯಾಗುವ ಸಾಧ್ಯತೆಗಳಿವೆ. ಅಲ್ಲದೆ ಹೈಕಮಾಂಡ್ ಬಳಿ ಸಚಿವ ಸ್ಥಾನ ಕೈ ತಪ್ಪಿರುವುದಕ್ಕೆ ಅಸಮಾಧಾನ ಹೊರ ಹಾಕುವ ಸಾಧ್ಯತೆ ಕೂಡ ದಟ್ಟವಾಗಿದೆ.
ಇದೇ ವೇಳೆ ಸಿಪಿವೈ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ವಕೀಲರ ಭೇಟಿಗೆ ಬಂದಿರುವುದಾಗಿ ಹೇಳುವ ಮೂಲಕ ದೆಹಲಿ ಭೇಟಿ ಬಗ್ಗೆ ಗೌಪ್ಯತೆ ಬಿಟ್ಟು ಕೊಡಲು ಹಿಂದೇಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸೈನಿಕ, ದೆಹಲಿಯಲ್ಲಿ ಸೀಕ್ರೆಟ್ ಮಿಷನ್ ಆರಂಭಿಸಿದ್ರಾ ಅನ್ನೋ ಅನುಮಾನವೊಂದು ಎದ್ದಿದೆ.ಇತ್ತ ಹೈಕಮಾಂಡ್ ಒಂದು ವೇಳೆ ಸಿ.ಪಿ ಯೋಗೇಶ್ವರ್ ಭೇಟಿಗೆ ಸಮಯ ನೀಡಿದ್ದಲ್ಲಿ ದೆಹಲಿಗೆ ಬರುವ ಅಸಮಾಧಾನಿತರ ಸಂಖ್ಯೆ ಹೆಚ್ಚಳವಾಗಲಿದೆ. ಸಚಿವ ಸ್ಥಾನ ಸಿಗದ ನಾಯಕರು ಪದೇ ಪದೇ ಹೈಕಮಾಂಡ್ ಭೇಟಿಯಾಗುವ ಬೆಳವಣಿಗೆ ಹೆಚ್ಚಾಗಬಹುದು.
ಒಟ್ಟಿನಲ್ಲಿ ಯೋಗೇಶ್ವರ್ ಗೆ ಅವಕಾಶ ಕೊಟ್ಟಲ್ಲಿ ಮತ್ತಷ್ಟು ಶಾಸಕರು ದೆಹಲಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು