News Karnataka Kannada
Friday, May 10 2024
ಕರ್ನಾಟಕ

ನದಿಯಲ್ಲಿ ಮೊಸಳೆ ದಾಳಿಯಿಂದ ವ್ಯಕ್ತಿ ಗಂಭೀರ

Photo Credit :

ನದಿಯಲ್ಲಿ ಮೊಸಳೆ ದಾಳಿಯಿಂದ ವ್ಯಕ್ತಿ ಗಂಭೀರ

ಕಾರವಾರ: ಅಯ್ಯಪ್ಪ ಸ್ವಾಮಿ ಮಾಲಾಧಾರಿ ವ್ಯಕ್ತಿಯೊಬ್ಬರು ನದಿಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಮೊಸಳೆಯೊಂದು ದಾಳಿ ನಡೆಸಿ ಎಳೆದೊಯ್ದು ಗಾಯಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿ ಶುಕ್ರವಾರ ಸಂಭವಿಸಿದೆ.

ದಾಂಡೇಲಿಯ ನಿರ್ಮಲ ನಗರ ನಿವಾಸಿ ನಾಗೇಶ್ ಈಶ್ವರ ಬಳ್ಳಾರಿ ಮೊಸಳೆ ಎಳೆದೊಯ್ದು ಗಾಯಗೊಳಿಸಿದ ವ್ಯಕ್ತಿ. ದಾಂಡೇಲಿಯ ಕಾಳಿ ನದಿ ತಟದ ಈಶ್ವರ ಮಂದಿರದ ಬಳಿ ಸ್ನಾನಕ್ಕೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ.

ತಕ್ಷಣ ಮಾಹಿತಿ ಪಡೆದ ಅರಣ್ಯ ಹಾಗೂ ಪೊಲೀಸ್ ಇಲಾಖೆಯವರು ಸ್ಥಳಕ್ಕೆ ಬಂದು ನಾಗೇಶ್ ಅವರನ್ನು ರಕ್ಷಣೆ ಮಾಡಿದ್ದಾರೆ. ಮೊಸಳೆ ದಾಳಿಯಿಂದಾಗಿ ಕಾಲು, ಕೈ ಹಾಗೂ ಮೈ ಮೇಲೆ ಗಂಭೀರ ಗಾಯಗಳಾಗಿದೆ. ಗಾಯಾಳುವನ್ನು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು