Categories: ಕರ್ನಾಟಕ

ನನಗೆ ರಾಜಕೀಯ ಪಕ್ಷಗಳ ಮೇಲೆ ನಂಬಿಕೆಯಿಲ್ಲ: ಪ್ರಕಾಶ್ ರೈ

ಮಂಡ್ಯ: ನನಗೆ ಯಾವುದೇ ರಾಜಕೀಯ ಪಕ್ಷಗಳ ಮೇಲೆ ನಂಬಿಕೆ ಇಲ್ಲ. ಬಿಜೆಪಿ ವಿರುದ್ಧ ಮಾತನಾಡಿದ ಮಾತ್ರಕ್ಕೆ ನಾನು ಕಾಂಗ್ರೆಸ್, ಜೆಡಿಎಸ್ ಅಥವಾ ಕಮ್ಯುನಿಸ್ಟ್ ಪರ ಎಂದು ಭಾವಿಸಬೇಕಿಲ್ಲ, ಎಂದು ನಟ-ಚಿಂತಕ ಪ್ರಕಾಶ್ ರೈ ಹೇಳಿದ್ದಾರೆ.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ`ಜಸ್ಟ್ ಆಸ್ಕಿಂಗ್’ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಬಿಜೆಪಿ ಬಣ್ಣ ಬಯಲು ಮಾಡುತ್ತಿರುವ ನಾನು ನಾಳೆ ಇನ್ನಿಬ್ಬರ ಬಣ್ಣ ಬಯಲು ಮಾಡುವುದಕ್ಕೂ ಸಿದ್ಧನಿದ್ದೇನೆ.

ನಾನು ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಜಾತಿ-ಧರ್ಮದ ವಾದಿಯಲ್ಲ. ನಾನೊಬ್ಬ ವಾಸ್ತವವಾದಿ. ನೀವು ಹಿಂದೂ ಆಗಿರುವುದಕ್ಕೆ ನನ್ನ ಅಭ್ಯಂತರವಿಲ್ಲ. ಆ ಮನೋ ಧೋರಣೆಯನ್ನು ಇನ್ನೊಬ್ಬರ ಮೇಲೆ ಬಲವಂತವಾಗಿ ಹೇರುವುದನ್ನಷ್ಟೇ ನಾನು ವಿರೋಧಿಸುತ್ತಿದ್ದೇನೆ.

ನಾನು ಹಿಂದೂ ಧರ್ಮದ ವಿರೋಧಿಯಲ್ಲ. ಅದೊಂದು ಸಹಿಷ್ಣುತೆಯಿಂದ ಕೂಡಿದ ಧರ್ಮ. ವಿಶಾಲತೆ ಮತ್ತು ವೈಶಿಷ್ಟ್ಯತೆಯನ್ನೊಳಗೊಂಡಿರುವ ಧರ್ಮ. ಕೊಲ್ಲು ಎಂದು ಯಾವ ಧರ್ಮವೂ ಹೇಳುವುದಿಲ್ಲ. ನನಗೆ ಯಾವುದೇ ಹೆದರಿಕೆ ಇಲ್ಲ. ನಿಖರ ಮತ್ತು ನಿಷ್ಠುರವಾಗಿ ಮಾತನಾಡುತ್ತೇನೆ. ನನಗನ್ನಿಸಿದ್ದನ್ನು ನಾನು ಹೇಳುತ್ತೇನೆ. ಅದನ್ನು ಒಪ್ಪಿಕೊಳ್ಳುವುದು ಜನರಿಗೆ ಬಿಟ್ಟ ವಿಚಾರ ಎಂದರು.

ಸಮಾಜದಲ್ಲಿರುವ ಜನರನ್ನು ಜಾಗೃತಗೊಳಿಸುವ ಸಲುವಾಗಿ `ಜಸ್ಟ್ ಆಸ್ಕಿಂಗ್’ ಎಂಬ ಆಂದೋಲನ ಶುರು ಮಾಡಿದ್ದೇನೆ. ಇದು ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಎಲ್ಲಾ ಜಿಲ್ಲೆಗಳಿಗೂ ಭೇಟಿ ಕೊಟ್ಟು ಸ್ಥಳೀಯವಾಗಿರುವ ಮುಖ್ಯ ಸಮಸ್ಯೆಗಳನ್ನು ಅರಿಯುವ ಪ್ರಯತ್ನ ಮಾಡುತ್ತಿದ್ದೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಯಬೇಕು.

ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶಕ್ಕೆ ದೊಡ್ಡ ಅಪಾಯವಿದೆ. ದೇಶಕ್ಕೆ ಅಪಾಯಕಾರಿಯಾಗಿ ಬೆಳವಣಿಗೆ ಕಾಣುತ್ತಿರುವ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ನಾನೂ ಗೋ ರಕ್ಷಕ, ನನ್ನ ಬಳಿ 48 ದೇಶೀ ತಳಿಯ ಗೋವುಗಳಿವೆ. ಅವುಗಳಿಂದ ಜೀವಾಮೃತ ಮಾಡುವುದನ್ನು ಕಲಿತಿದ್ದೇನೆ. ಸಂಘ ಪರಿವಾರದವರು ಅದರಲ್ಲಿ 330 ಕೋಟಿ ದೇವರುಗಳನ್ನು ಕಂಡರೆ, ನಾನು 330 ಕೋಟಿ ಸೂಕ್ಷ್ಮ ಜೀವಾಣುಗಳನ್ನು ಕಂಡಿದ್ದೇನೆ. ನಾನು ಗೋಹತ್ಯೆ ಮಾಡುವುದನ್ನಷ್ಟೇ ಅಲ್ಲ. ಎಲ್ಲಾ ಪ್ರಾಣಿಗಳ ವಧೆಯನ್ನೂ ವಿರೋಧಿಸುತ್ತೇನೆ ಎಂದು ಇದೇ ವೇಳೆ ಹೇಳಿದರು.

Desk

Recent Posts

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

2 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

17 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

30 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

53 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

58 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

1 hour ago