News Karnataka Kannada
Monday, April 29 2024
ಮೈಸೂರು

ನಾನು ದಲಿತನಲ್ಲ ಬ್ರಾಹಣ ಎಂದ ಪ್ರಿನ್ಸ್‌ ಹೋಟೆಲ್‌ ಸಿಬ್ಬಂದಿ ಗಂಗಾಧರ್‌

Sandesh Prince Hotel 17 7 21
Photo Credit :

ಮೈಸೂರು: ನಿರ್ದೇಶಕ , ಪತ್ರಕರ್ತ ಇಂದ್ರಜಿತ್‌ ಲಂಕೇಶ್‌ ಅವರು ನಟ ದರ್ಶನ್‌ ಅವರ ಮೇಲೆ ಹಲ್ಲೆಯ ಆರೋಪ ಹೊರಿಸಿ ಪೋಲೀಸರಿಗೆ ನೀಡಿದ ದೂರಿನ ಮೇರೆಗೆ ಇಂದು ಸಂದೇಶ್ ಪ್ರಿನ್ಸ್ ಹೋಟೆಲಿಗೆ ಭೆಟಿ ನೀಡಿ ವಿಚಾರಣೆ ಆರಂಬಿಸಿದ ಪೋಲೀಸರ ಎದುರು ಸರ್ವಿಸ್ ಮ್ಯಾನೇಜರ್ ಗಂಗಾಧರ್ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ತಾನು ದಲಿತನಲ್ಲವೆಂದೂ ಬ್ರಾಹಣ ಎಂದೂ ಸ್ಪಷ್ಟಪಡಿಸಿದ್ದಾರೆ.
ಇಂದ್ರಜಿತ್ ಲಂಕೇಶ್ ಮಾಡಿರುವ ಆರೋಪ ಸಂಬಂಧ ಇಂದು ಪೊಲೀಸರು ಪೊಲೀಸರು ಹೋಟೆಲಿಗೆ ತೆರಳಿಸಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗಂಗಾಧರ್ ಕೂಡ ಪೊಲೀಸರ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ.ಈ ವೇಳೆ ತಾನು ದಲಿತ ಸಮುದಾಯದವನಲ್ಲ, ಬ್ರಾಹ್ಮಣ ಸಮುದಾಯದವನು ಎಂದು ಪೊಲೀಸರ ಮುಂದೆ ಗಂಗಾಧರ್ ಹೇಳಿದ್ದಾರೆ. ಸಿಸಿಟಿವಿ ಪರಿಶೀಲನೆಯ ಬಳಿಕ ಗಂಗಾಧರ್ ಹೇಳಿಕೆ ಮುಕ್ತಾಯವಾದ ಬಳಿಕ ಪೊಲೀಸರು ಬಿಹಾರ ಮೂಲದ ಟ್ರೈನಿ ಸಮೀರ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ನಿನ್ನೆ ಏಕಾಏಕಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡಿರುವ ಇಂದ್ರಜಿತ್, ದರ್ಶನ್ ವಿರುದ್ಧ ಗಂಭೀರ ಆರೋಪ ಮಾಡಿ ದೂರು ದಾಖಲಿಸಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಇಂದ್ರಜಿತ್, ಹೋಟೆಲ್ ವೇಟರ್ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ಗೋಪಾಲ್ ರಾಜ್ ಎಂಬಾತನ ಕಣ್ಣು ಹೋಗಿದೆ. ಅಲ್ಲದೆ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು.
ಈ ವಿಚಾರ ಭಾರೀ ಚರ್ಚೆಯಾಗುತ್ತಿದ್ದ ಬೆನ್ನಲ್ಲೇ ಮಾತನಾಡಿದ್ದ ಗೋಪಾಲ್ ರಾಜ್, ದರ್ಶನ್ ನನ್ನ ಮೇಲೆ ಹಲ್ಲೆ ನಡೆಸಿಲ್ಲ. ನಾನು ಕೋಮಾದಲ್ಲಿಯೂ ಇಲ್ಲ. ನಿರ್ಮಾಪಕರಾದ ಇಂದ್ರಜಿತ್ ಲಂಕೇಶ್ ಮಾಡಿರುವ ಆರೋಪಗಳೆಲ್ಲ ಸುಳ್ಳು ಎಂದು ಸ್ಪಷ್ಟಪಡಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು