ಶಿವಮೊಗ್ಗ: ಶಿವಮೊಗ್ಗದ ನೂತನ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕೆ.ಎಂ.ಶಾಂತರಾಜು ಅವರು ಲಕ್ಷ್ಮೀ ಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ನೂತನ ಎಸ್ಪಿ ಲಕ್ಷ್ಮೀ ಪ್ರಸಾದ್ ಅವರಿಗೆ ಗಾರ್ಡ್ ಆಫ್ ಹಾನರ್ ನೀಡಲಾಯಿತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಶಿವಮೊಗ್ಗ ಅತ್ಯಂತ ಚಾಲೆಂಜಿಂಗ್ ಜಿಲ್ಲೆ. ಈ ಜಿಲ್ಲೆಯನ್ನು ಅರ್ಥೈಸಿಕೊಂಡು, ಜನರ ಸಹಕಾರದೊಂದಿಗೆ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತೇವೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸುತ್ತೇವೆ ಎಂದು ಅವರು ತಿಳಿಸಿದರು.