ಬೆಂಗಳೂರು, ;ರಾಜ್ಯದಲ್ಲಿ ಮತ್ತೊಂದು ಹೊಸ ಮರಳು ನೀತಿ ಜಾರಿಗೊಳ್ಳ ಲಿದ್ದು, ಸಂಪುಟ ಸಭೆಯಲ್ಲಿ ಹೊಸ ಮರಳು ನೀತಿಗೆ ಅನುಮೋದನೆ ಸಿಗುವ ಸಾಧ್ಯತೆ ಇದೆ. ಆದರೆ, ಈ ಹೊಸ ಮರಳು ನೀತಿಯಲ್ಲಿ ಉಚಿತ ಮರಳು ನೀಡುವ ಅಂಶವನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ. ಆಗಿನ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಆಣತಿಯಂತೆ ಹೊಸ ಮರಳು ನೀತಿಯನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿತ್ತು.
ಬಳಿಕ ಗಣಿ ಮತ್ತು ಭೂ ವಿಜ್ಞಾನ ಖಾತೆ ವಹಿಸಿಕೊಂಡ ಮುರುಗೇಶ್ ಆರ್.ನಿರಾಣಿ ಮತ್ತೊಂದು ಹೊಸ ಮರಳು ನೀತಿ ಜಾರಿಗೆ ತರಲು ನಿರ್ಧರಿಸಿದ್ದರು. ಇನ್ನೇನು ಮರಳು ನೀತಿ ಜಾರಿಗೊಳಿಸುವ ಹಂತದಲ್ಲಿ ದ್ದಾಗಲೇ ಮತ್ತೆ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವರು ಬದಲಾಗಿದ್ದಾರೆ. ನೂತನ ಸಚಿವರಾಗಿ ಹಾಲಪ್ಪ ಆಚಾರ್ ಇದೀಗ ಮರಳು ನೀತಿಗೆ ಮತ್ತೆ ಹೊಸ ಸ್ವರೂಪ ನೀಡಲಿದ್ದಾರೆ.ಮುರುಗೇಶ್ ನಿರಾಣಿ ಅವರು ಸಚಿವರಾಗಿದ್ದ ಸಂದರ್ಭ ರೂಪಿಸಲಾಗಿದ್ದ ಹೊಸ ಮರಳು ನೀತಿ ಯಲ್ಲಿ ಬಡವರಿಗೆ ಉಚಿತ ಮರಳು ವಿತರಿಸುವ ಪ್ರಸ್ತಾಪ ಇತ್ತು. ಆದರೆ ಈಗ ಇದನ್ನು ಕೈಬಿಡಲು ನೂತನ ಸಚಿವರು ಮುಂದಾಗಿದ್ದಾರೆ. ನಿರಾಣಿ ಸಚಿವರಾಗಿದ್ದಾಗ ರೂಪಿಸಿದ್ದ ಮರಳು ನೀತಿ ಕರಡುನಲ್ಲಿ 10 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಮನೆ ಕಟ್ಟಿಕೊಳ್ಳುವ ಬಡವರು, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವಂತೆ ಹೊಸ ಮರಳು ನೀತಿ ಜಾರಿಗೆ ತರಲು ಚಿಂತಿಸಿದ್ದರು. ಬಡವರಿಗೆ ಮನೆ ಕಟ್ಟಿಕೊಳ್ಳಲು ತೊಂದರೆಯಾಗದಂತೆ ಉಚಿತ ವಾಗಿ ಮರಳು ವಿತರಿಸಲು ಯೋಚಿಸಿದ್ದರು.
ನೂತನ ಮರಳು ನೀತಿ ಜಾರಿಗೆ ಸಚಿವ ಸಂಪುಟ ಅನುಮೋದನೆ ?
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.