Categories: ಕರ್ನಾಟಕ

ನೂತನ ಮರಳು ನೀತಿ ಜಾರಿಗೆ ಸಚಿವ ಸಂಪುಟ ಅನುಮೋದನೆ ?

ಬೆಂಗಳೂರು, ;ರಾಜ್ಯದಲ್ಲಿ ಮತ್ತೊಂದು ಹೊಸ ಮರಳು ನೀತಿ ಜಾರಿಗೊಳ್ಳ ಲಿದ್ದು, ಸಂಪುಟ ಸಭೆಯಲ್ಲಿ ಹೊಸ ಮರಳು ನೀತಿಗೆ ಅನುಮೋದನೆ ಸಿಗುವ ಸಾಧ್ಯತೆ ಇದೆ. ಆದರೆ, ಈ ಹೊಸ ಮರಳು ನೀತಿಯಲ್ಲಿ ಉಚಿತ ಮರಳು ನೀಡುವ ಅಂಶವನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ. ಆಗಿನ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಆಣತಿಯಂತೆ ಹೊಸ ಮರಳು ನೀತಿಯನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿತ್ತು.
ಬಳಿಕ ಗಣಿ ಮತ್ತು ಭೂ ವಿಜ್ಞಾನ ಖಾತೆ ವಹಿಸಿಕೊಂಡ ಮುರುಗೇಶ್ ಆರ್.ನಿರಾಣಿ ಮತ್ತೊಂದು ಹೊಸ ಮರಳು ನೀತಿ ಜಾರಿಗೆ ತರಲು ನಿರ್ಧರಿಸಿದ್ದರು. ಇನ್ನೇನು ಮರಳು ನೀತಿ ಜಾರಿಗೊಳಿಸುವ ಹಂತದಲ್ಲಿ ದ್ದಾಗಲೇ ಮತ್ತೆ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವರು ಬದಲಾಗಿದ್ದಾರೆ. ನೂತನ ಸಚಿವರಾಗಿ ಹಾಲಪ್ಪ ಆಚಾರ್ ಇದೀಗ ಮರಳು ನೀತಿಗೆ ಮತ್ತೆ ಹೊಸ ಸ್ವರೂಪ ನೀಡಲಿದ್ದಾರೆ.ಮುರುಗೇಶ್ ನಿರಾಣಿ ಅವರು ಸಚಿವರಾಗಿದ್ದ ಸಂದರ್ಭ ರೂಪಿಸಲಾಗಿದ್ದ ಹೊಸ ಮರಳು ನೀತಿ ಯಲ್ಲಿ ಬಡವರಿಗೆ ಉಚಿತ ಮರಳು ವಿತರಿಸುವ ಪ್ರಸ್ತಾಪ ಇತ್ತು. ಆದರೆ ಈಗ ಇದನ್ನು ಕೈಬಿಡಲು ನೂತನ ಸಚಿವರು ಮುಂದಾಗಿದ್ದಾರೆ. ನಿರಾಣಿ ಸಚಿವರಾಗಿದ್ದಾಗ ರೂಪಿಸಿದ್ದ ಮರಳು ನೀತಿ ಕರಡುನಲ್ಲಿ 10 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಮನೆ ಕಟ್ಟಿಕೊಳ್ಳುವ ಬಡವರು, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವಂತೆ ಹೊಸ ಮರಳು ನೀತಿ ಜಾರಿಗೆ ತರಲು ಚಿಂತಿಸಿದ್ದರು. ಬಡವರಿಗೆ ಮನೆ ಕಟ್ಟಿಕೊಳ್ಳಲು ತೊಂದರೆಯಾಗದಂತೆ ಉಚಿತ ವಾಗಿ ಮರಳು ವಿತರಿಸಲು ಯೋಚಿಸಿದ್ದರು.

Indresh KC

Recent Posts

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

5 mins ago

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

16 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

24 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

40 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

47 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

1 hour ago