News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

“ನೂರು ದಿನಗಳಲ್ಲಿ ಉತ್ತಮ ಆಡಳಿತ ನೀಡಿರುವುದು ನನಗೆ ತೃಪ್ತಿ ತಂದಿದೆ” : ಬಸವರಾಜ ಬೊಮ್ಮಾಯಿ

C M Basavaraj Bommai
Photo Credit :

ಹುಬ್ಬಳ್ಳಿ: ನೂರು ದಿನಗಳಲ್ಲಿ ಬಂದತಹ ಸವಾಲುಗಳುನ್ನು ಸರಿಯಾದ ನಿರ್ಣಯಗಳಿಂದ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮವಾದ ಆಡಳಿತ ನೀಡಿರುವುದು ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದೇ ರೀತಿ ಮುಂದಿನ ದಿನಗಳಲ್ಲಿ ಜನಸಾಮಾನ್ಯರಿಗೆ ಮನೆಯ ಬಾಗಿಲಿಗೆ ಸರ್ಕಾರವೆನ್ನುವ ಅಂಶವನ್ನಿಟ್ಟುಕೊಂಡು ಯೋಜನೆಗಳನ್ನು ರೂಪಿಸುವ ಗುರಿ ಇದೆ ಎಂದರು.

ನೂರು ದಿನಗಳಲ್ಲಿ ಸರ್ಕಾರ ಭದ್ರ ಮತ್ತು ಭರವಸೆ ಹೆಜ್ಜೆಯಿಟ್ಟಿದ್ದು, ಮುಂದಿನ ದಿನಗಳಲ್ಲಿ ಜನಪರವಾದಂತಹ ದಿಕ್ಕಿನಲ್ಲಿ ಸಾಗಲು ಅನುಕೂಲವಾಗಿದೆ. ನೂರು ದಿನದಲ್ಲಿ ಅಮೃತ ಯೋಜನೆ, ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಬಡವರಿಗೆ ಸಂದ್ಯಾ ಸುರಕ್ಷಾ, ಅಂಗವಿಕಲರಿಗೆ ಮತ್ತು ವೃದ್ಧಾಪ್ಯರಿಗೆ ಮಾಶಾಸನ ಹೆಚ್ಚಿಸಲಾಗಿದೆ ಎಂದರು.

ಈಗ ತಾನೇ ಆರ್ಥಿಕ ಸುಧಾರಣೆಯಾಗುತ್ತಿದೆ. ಇದನ್ನು ನೋಡಿಕೊಂಡು ವಿಶೇಷವಾದ ಯೋಜನೆಗಳ ಮೂಲಕ ಬರುವಂತಹ ದಿನಗಳಲ್ಲಿ ಜನಸಾಮಾನ್ಯರ ಹತ್ತಿರ ಸರ್ಕಾರ ಹೋಗುವಂತಾಗಬೇಕು. ಆರ್ಥಿಕತೆಯಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಹೆಣ್ಣುಮಕ್ಕಳ ಸೇರಿದಂತೆ ಮಾನವಸಂಪನ್ಮೂಲ ತೊಡಗಿಕೊಳ್ಳುವಂತಹ ಉತ್ತಮ ಕಾರ್ಯಕ್ರಮ ತರುವ ಉದ್ದೇಶವಿದೆ ಎಂದು ತಿಳಿಸಿದರು.

ಜನಸೇವಕ ಯೋಜನೆಯನ್ನು ಜನವರಿ 26 ರಿಂದ ರಾಜ್ಯಾದ್ಯಂತ ಜಾರಿಗೆಗೊಳಿಸಲಾಗುವುದು. ಇದು ಉತ್ತಮವಾದ ಯೋಜನೆಯಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು