ಹುಬ್ಬಳ್ಳಿ: ನೂರು ದಿನಗಳಲ್ಲಿ ಬಂದತಹ ಸವಾಲುಗಳುನ್ನು ಸರಿಯಾದ ನಿರ್ಣಯಗಳಿಂದ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮವಾದ ಆಡಳಿತ ನೀಡಿರುವುದು ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದೇ ರೀತಿ ಮುಂದಿನ ದಿನಗಳಲ್ಲಿ ಜನಸಾಮಾನ್ಯರಿಗೆ ಮನೆಯ ಬಾಗಿಲಿಗೆ ಸರ್ಕಾರವೆನ್ನುವ ಅಂಶವನ್ನಿಟ್ಟುಕೊಂಡು ಯೋಜನೆಗಳನ್ನು ರೂಪಿಸುವ ಗುರಿ ಇದೆ ಎಂದರು.
ನೂರು ದಿನಗಳಲ್ಲಿ ಸರ್ಕಾರ ಭದ್ರ ಮತ್ತು ಭರವಸೆ ಹೆಜ್ಜೆಯಿಟ್ಟಿದ್ದು, ಮುಂದಿನ ದಿನಗಳಲ್ಲಿ ಜನಪರವಾದಂತಹ ದಿಕ್ಕಿನಲ್ಲಿ ಸಾಗಲು ಅನುಕೂಲವಾಗಿದೆ. ನೂರು ದಿನದಲ್ಲಿ ಅಮೃತ ಯೋಜನೆ, ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಬಡವರಿಗೆ ಸಂದ್ಯಾ ಸುರಕ್ಷಾ, ಅಂಗವಿಕಲರಿಗೆ ಮತ್ತು ವೃದ್ಧಾಪ್ಯರಿಗೆ ಮಾಶಾಸನ ಹೆಚ್ಚಿಸಲಾಗಿದೆ ಎಂದರು.
ಈಗ ತಾನೇ ಆರ್ಥಿಕ ಸುಧಾರಣೆಯಾಗುತ್ತಿದೆ. ಇದನ್ನು ನೋಡಿಕೊಂಡು ವಿಶೇಷವಾದ ಯೋಜನೆಗಳ ಮೂಲಕ ಬರುವಂತಹ ದಿನಗಳಲ್ಲಿ ಜನಸಾಮಾನ್ಯರ ಹತ್ತಿರ ಸರ್ಕಾರ ಹೋಗುವಂತಾಗಬೇಕು. ಆರ್ಥಿಕತೆಯಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಹೆಣ್ಣುಮಕ್ಕಳ ಸೇರಿದಂತೆ ಮಾನವಸಂಪನ್ಮೂಲ ತೊಡಗಿಕೊಳ್ಳುವಂತಹ ಉತ್ತಮ ಕಾರ್ಯಕ್ರಮ ತರುವ ಉದ್ದೇಶವಿದೆ ಎಂದು ತಿಳಿಸಿದರು.
ಜನಸೇವಕ ಯೋಜನೆಯನ್ನು ಜನವರಿ 26 ರಿಂದ ರಾಜ್ಯಾದ್ಯಂತ ಜಾರಿಗೆಗೊಳಿಸಲಾಗುವುದು. ಇದು ಉತ್ತಮವಾದ ಯೋಜನೆಯಾಗಿದೆ ಎಂದರು.
ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…
ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…
ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…
ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಸ್ಥೆಯ 85 ಫ್ಲೈಟ್ಗಳು ರದ್ದಾಗಿವೆ.
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…
ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…