News Karnataka Kannada
Sunday, April 28 2024
ಕರ್ನಾಟಕ

ಪಕ್ಷ ತೊರೆದವರಿಗೆ ಮತ್ತೆ ಬಾಗಿಲು ತೆರೆಯಲ್ಲ ; ಸಿದ್ದರಾಮಯ್ಯ

Siddaramaiah Bang 17 6 21 No 176218 Newsk 3471785224
Photo Credit :

ಬೆಂಗಳೂರು: ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿದ್ದಂತೆ ಪ್ರಮುಖ ಪ್ರತಿಪಕ್ಷವಾದ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿಯೂ ಭಿನ್ನಮತ ಮುಂದುವರಿದಿದೆ. ಒಂದಷ್ಟು ದಿನ ‘ಮುಂದಿನ ಮುಖ್ಯಮಂತ್ರಿ’ ವಿಚಾರವಾಗಿ ಕಾಂಗ್ರೆಸ್​​ನಲ್ಲಿ ಬಿಸಿಬಿಸಿ ಚರ್ಚೆಗಳು ನಡೆದವು. ಅದಾದ ಬಳಿಕ ಈಗ ಘರ್ ವಾಪಸಿ ಬಗ್ಗೆ ಚರ್ಚೆ ಬಿಸಿಯೇರಿದೆ. ಮುಖ್ಯವಾಗಿ ರಾಜ್ಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಿನ್ನ ನಿಲುವುಗಳನ್ನು ತಳೆದಿದ್ದಾರೆ.
ಪಕ್ಷ ಬಿಟ್ಟು ಹೋದವರ ಘರ್ ವಾಪಸಾತಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ. ಪಕ್ಷ ಬಿಟ್ಟು ಹೋದ ಶಾಸಕರನ್ನ ವಾಪಸ್ ಸೇರಿಸಿಕೊಳ್ಳೋ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಕಡ್ಡಿಮುರಿದಂಗೆ ಹೇಳಿದ್ದಾರೆ.
ಅವರನ್ನು (17 ಶಾಸಕರನ್ನು) ಪಕ್ಷಕ್ಕೆ ಸೇರಿಸಿಕೊಳ್ಳೋದಿಲ್ಲ ಅಂತಾ ಸದನದಲ್ಲೂ ಹೇಳಿದ್ದೇನೆ. ಬಿಜೆಪಿಗೆ ಹೋದವರನ್ನ ಮತ್ತೆ ಸೇರಿಸಿಕೊಳ್ಳಲ್ಲ ಅನ್ನೋ ಹೇಳಿಕೆಗೆ ಈಗಲೂ ಬದ್ಧ ಎಂದು ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಷ್ಟಕ್ಕೂ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸೇರಿದ್ದ ಶಾಸಕರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದೇನೆಂದ್ರೆ ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರ ಬೀಳಿಸಿ, ಬಿಜೆಪಿ ಸೇರಿದ್ದವರನ್ನು ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸೇರಿಸಿಕೊಳ್ಳುತ್ತೇವೆ ಅಂದಿದ್ದರು.
ಆಪರೇಷನ್ ಕಮಲದಲ್ಲಿ ಪಕ್ಷ ತೊರದವರಿಗೆ ಅವಕಾಶ ಇದೆ. ಬಾಂಬೆ ಫ್ರೆಂಡ್ಸ್‌ ಮತ್ತೆ ಕಾಂಗ್ರೆಸ್ ಸೇರಲು ಅವಕಾಶ ಇದೆ. ಕಾಂಗ್ರೆಸ್‌ಗೆ ಮತ್ತೆ ಸೇರಲು ಅರ್ಜಿ ಹಾಕಿದರೆ ಪರಿಶೀಲಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದರು. ರಾಜಕೀಯದಲ್ಲಿ ಒಂದೇ ನಿಲುವು ತಾಳಲು ಸಾಧ್ಯವೇ ಇಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಬದಲಿಸಬೇಕಾಗುತ್ತದೆ. ಅರ್ಜಿ ಹಾಕಿದ್ದಲ್ಲಿ ವಾಪಸ್ ಕರೆಸಿಕೊಳ್ಳುವ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಪಕ್ಷ ತ್ಯಜಿಸಿ ಸರ್ಕಾರದಲ್ಲಿ ಮಂತ್ರಿಯಾದವರಿಗೆ ಡಿ.ಕೆ.ಶಿವಕುಮಾರ್ ಸಂದೇಶ ರವಾನಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು