ಬೆಂಗಳೂರು ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ವಿವಿಧ ನಾಯಕರುಗಳ ಜೊತೆ ನಿರಂತರ ಸಭೆ ನಡೆಸುವ ಮೂಲಕ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿದರು.
ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಯಾದ ಕೊಡಗಿನ ಮಾಜಿ ಸಚಿವ ಬಿ.ಎ.ಜೀವಿಜಯ, ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್, ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ, ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವ ರೆಡ್ಡಿ, ಮಾಜಿ ಸಚಿವರಾದ ಸಂತೋಷ್ ಲಾಡ್, ಶಿವರಾಜ್ ತಂಗಡಗಿ ಸೇರಿದಂತೆ ಅನೇಕ ನಾಯಕರು ಪ್ರತ್ಯೇಕವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಪಕ್ಷ ಸಂಘಟನೆ, ಮುಂದಿನ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಕೋವಿಡ್ ಪರಿಸ್ಥಿತಿ ಸೇರಿದಂತೆ ಹಲವಾರು ವಿಚಾರಗಳ ಕುರಿತು ಡಿ.ಕೆ.ಶಿವಕುಮಾರ್ ತಮ್ಮ ನಾಯಕರ ಜೊತೆ ಚರ್ಚೆ ನಡೆಸಿದರು.
ಪಕ್ಷ ಸಂಘಟನೆ ಕುರಿತು ವಿವಿಧ ನಾಯಕರ ಜೊತೆ ಡಿಕೆಶಿ ಚರ್ಚೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.