News Karnataka Kannada
Sunday, April 28 2024
ಕರ್ನಾಟಕ

ಪರಿಹಾರ ಕಾರ್ಯ ವಿಳಂಬ : 15 ದಿನಗಳ ಗಡುವು ನೀಡಿದ ಕೊಡಗು ಬಿಜೆಪಿ

Photo Credit :

ಪರಿಹಾರ ಕಾರ್ಯ ವಿಳಂಬ : 15 ದಿನಗಳ ಗಡುವು ನೀಡಿದ ಕೊಡಗು ಬಿಜೆಪಿ

ಮಡಿಕೇರಿ: ಕೊಡಗಿನ ಅತಿವೃಷ್ಟಿ ಹಾನಿ ಸಂತ್ರಸ್ತರ ಸಂಕಷ್ಟಗಳಿಗೆ ತಕ್ಷಣ ಸ್ಪಂದಿಸಿರುವ ಕೇಂದ್ರ ಸರ್ಕಾರ ಈಗಾಗಲೇ 546 ಕೊಟಿ ರೂ.ಗಳನ್ನು ಬಿಡುಗಡೆ ಮಾಡಿದೆ, ಆದರೆ ರಾಜ್ಯ ಸರ್ಕಾರದ ಪಾತ್ರ ಕ್ಷೀಣಿಸಿದೆ ಎಂದು ಆರೋಪಿಸಿರುವ ಜಿಲ್ಲಾ ಬಿಜೆಪಿ, ಮುಂದಿನ 15 ದಿನಗಳ ಒಳಗೆ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸದಿದ್ದಲ್ಲಿ ಪಕ್ಷದ ವತಿಯಿಂದ ಬೃಹತ್ ಜನಾಂದೋಲನ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್, ಜನರು ಮತ್ತು ಸರ್ಕಾರದ ಸಂಪÀÇರ್ಣ ಸಹಕಾರವಿದ್ದರು ಜಿಲ್ಲಾಡಳಿತ ನಿದ್ರಾವಸ್ಥೆಯಲ್ಲಿದೆ ಎಂದು ಟೀಕಿಸಿದರು. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಭಾರತೀಶ್, ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಜವಾಬ್ದಾರಿಯಿಂದ ನುಣುಚಿ ಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವೆÀ ನಿರ್ಮಲ ಸೀತಾರಾಮನ್ ಅವರು ಇಲ್ಲಿಯ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ ಕೇಂದ್ರ ತಂಡವನ್ನು ಕಳುಹಿಸುವ ಮೂಲಕ ವರದಿಯನ್ನು ಪಡೆದು 546 ಕೋಟಿ ರೂ. ಪರಿಹಾರ ಬಿಡುಗಡೆಯಾಗುವಂತೆ ನೋಡಿಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರ ಕೇವಲ ಭರವಸೆಯನ್ನಷ್ಟೆ ನೀಡಿ ಸುಮ್ಮನಾಗಿದೆ. ಪ್ರಾಧಿಕಾರ ರಚನೆಯ ಬೇಡಿಕೆ ಇನ್ನೂ ಕೂಡ ಈಡೇರಿಲ್ಲ. ಜಿಲ್ಲಾಡಳಿತದಿಂದ ಸಮರ್ಪಕ ರೀತಿಯಲ್ಲಿ ಪರಿಹಾರ ಕಾರ್ಯವನ್ನು ನಿಭಾಯಿಸಲು ಸಾಧ್ಯವಾಗುವುದಿಲ್ಲ ಎನ್ನುವ ಕಾರಣಕ್ಕಾಗಿ ಪ್ರಾಧಿಕಾರ ರಚನೆಯ ಬೇಡಿಕೆಯನ್ನು ಇಡಲಾಗಿತ್ತು. ಆದರೆ ಸರ್ಕಾರ ಈ ಬಗ್ಗೆಯೂ ನಿರ್ಲಕ್ಷ್ಯ ತೋರಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಪ್ರತ್ಯೇಕ ಇಲಾಖೆಗಳಿವೆಯೇ ಎಂದು ಅಸಮಾಧಾನ ವ್ಯಕ್ತಪಡಿಸಿದ ಭಾರತೀಶ್ ಸಂಬಂಧಿಸಿದ ಇಲಾಖೆಗಳು ಪುನರ್ವಸತಿಗಾಗಿ ಜಾಗ ಗುರುತಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.

ಸಂತ್ರಸ್ತರು ಪ್ರತಿಭಟನೆಯ ಹಂತಕ್ಕೆ ಬಂದು ತಲುಪಿದ್ದರು ಜಿಲ್ಲಾಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದ ಅವರು, ದಾನಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೋಟಿ ಕೋಟಿ ಹಣವನ್ನು ನೀಡಿದ್ದು, ಈ ಬಗ್ಗೆ ಸರ್ಕಾರ ಶ್ವೇತ ಪತ್ರ ಹೊರಡಿಸಬೇಕೆಂದು ಒತ್ತಾಯಿಸಿದರು. ಪರಿಹಾರ ಕಾರ್ಯದ ಸಂದರ್ಭ ಹಲವರ ಹೆಸರನ್ನು ಬಿಡಲಾಗಿದ್ದು, ಸಂತ್ರಸ್ತರು ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಕಛೇರಿಗೆ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳೇ ಖುದ್ದು ಗ್ರಾಮಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಸ್ಥಳದಲ್ಲೆ ಪರಿಹಾರ ನೀಡಬೇಕೆಂದು ಭಾರತೀಶ್ ಒತ್ತಾಯಿಸಿದರು. ಅನೇಕ ದಾನಿಗಳು ಮನೆ ಮತ್ತು ಶಾಲೆಗಳನ್ನು ನಿರ್ಮಿಸಿಕೊಡಲು ಮುಂದೆ ಬಂದಿದ್ದರು ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಿಲ್ಲ ಎಂದು ಟೀಕಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು