News Karnataka Kannada
Tuesday, May 07 2024
ಕರ್ನಾಟಕ

ಪವಿತ್ರ ತೀರ್ಥೋದ್ಭವ, ದಸರಾ ಸಂದರ್ಭ ಕೋವಿಡ್ ನಿಯಮ ಪಾಲಿಸಲು ಜಿಲ್ಲಾಡಳಿತ ಮನವಿ

Photo Credit :

ಪವಿತ್ರ ತೀರ್ಥೋದ್ಭವ, ದಸರಾ ಸಂದರ್ಭ ಕೋವಿಡ್ ನಿಯಮ ಪಾಲಿಸಲು ಜಿಲ್ಲಾಡಳಿತ ಮನವಿ

ಮಡಿಕೇರಿ: ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಕಳೆದ ಎರಡು ವಾರಗಳಿಂದ ಹೆಚ್ಚಾಗುತ್ತಿದ್ದು, ಪರೀಕ್ಷೆಗೆ ಒಳಪಟ್ಟ ನೂರು ಜನರಲ್ಲಿ ಹದಿನೆಂಟು ಮಂದಿಗೆ ಪಾಸಿಟಿವ್ ಬರುತ್ತಿದೆ. ಜೊತೆಗೆ ಮರಣ ಪ್ರಮಾಣ ಶೇ.1.4 ರಷ್ಟು ಇದ್ದು, ಇದನ್ನು 1 ಕ್ಕಿಂತ ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತದೆ. ಆದ್ದರಿಂದ ದಸರಾ ಮತ್ತು ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರಾ ಸಂದರ್ಭದಲ್ಲಿ ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮನವಿ ಮಾಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ದಸರಾ ಸಮಿತಿ ಹಾಗೂ ತಲಕಾವೇರಿ-ಭಾಗಮಂಡಲ ವ್ಯವಸ್ಥಾಪನಾ ಸಮಿತಿ ಅವರ ಅಭಿಪ್ರಾಯ ಪಡೆದು ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋರಿದರು.

ದಸರಾ ಮತ್ತು ತಲಕಾವೇರಿ ಪವಿತ್ರ ತೀರ್ಥೋದ್ಭವವನ್ನು ಶ್ರದ್ಧಾಭಕ್ತಿಯಿಂದ ಸಾಂಪ್ರದಾಯಿಕವಾಗಿ ಆಚರಿಸಬೇಕಿದೆ. ಗಣೇಶೋತ್ಸವ ಸಂದರ್ಭದಲ್ಲಿ ಅನುಸರಿಸಿದ ಮಾರ್ಗಸೂಚಿಗಳನ್ನು ಈ ಸಂದರ್ಭದಲ್ಲಿಯೂ ಪಾಲಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದಂತೆ ಹಣ ಬಿಡುಗಡೆಯಾಗಲಿದೆ. ಕರಗ ಉತ್ಸವದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಈ ಸಂಬಂಧ ಅಕ್ಟೋಬರ್, 14 ಮತ್ತು 15 ರಂದು ಕೋವಿಡ್ ಪರೀಕ್ಷೆ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ನಿರ್ದೇಶನ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಕರಗ ಉತ್ಸವದಲ್ಲಿ ಪಾಲ್ಗೊಳ್ಳುವವರನ್ನು ಎರಡು ಬಾರಿ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ಇಂತವರಿಗೆ ವೈದ್ಯಕೀಯ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದರು.

ದಸರಾ ಸಂದರ್ಭದ ವಿಜಯ ದಶಮಿಯಂದು ರಾತ್ರಿ 10 ಗಂಟೆಯೊಳಗೆ ಮಂಟಪ ಪೂಜಾ ಕಾರ್ಯಗಳು ಕೊನೆಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಕರಗ ಉತ್ಸವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಸುವುದು, ಅಂತರ ಕಾಯ್ದುಕೊಳ್ಳಬೇಕು. ಮಡಿಕೇರಿ ನಗರದಲ್ಲಿ ಬೀದಿ ದೀಪ ಅಳವಡಿಸುವಂತೆ ಪೌರಾಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.

ಅಕ್ಟೋಬರ್, 17 ಮತ್ತು 26 ರಂದು ಎರಡು ದಿನದ ಮಟ್ಟಿಗೆ ರಾಜಾಸೀಟು ಮತ್ತು ಅಬ್ಬಿಪಾಲ್ಸ್ ಪ್ರವಾಸಿ ಕೇಂದ್ರಗಳು ಮುಚ್ಚಿರುತ್ತವೆ. ಆದ್ದರಿಂದ ಪ್ರವಾಸಿಗರು ಸಹಕರಿಸುವಂತೆ ಅನೀಸ್ ಕಣ್ಮಣಿ ಜಾಯ್ ಅವರು ಅವರು ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರು ಮಾತನಾಡಿ ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಪೊಲೀಸ್ ಬಂದೋ ಬಸ್ತ್ ಮಾಡಿಕೊಳ್ಳಲಾಗಿದ್ದು, ಕೋವಿಡ್ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಅವರು ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು