Categories: ಕರ್ನಾಟಕ

ಪಿಡಬ್ಲೂಡಿ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ವಿರೋಧ

ಚಿಕ್ಕಮಗಳೂರು: ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಪಿಡಬ್ಲೂಡಿ ಇಲಾಖೆ ಸುಪರ್ದಿಯಲ್ಲಿರುವ ಜಾಗದಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕಾಂಪೌಂಡ್ ಒಡೆಯಲು ಮುಂದಾಗಿದ್ದಾಗ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದರು.

ಸ್ಥಳೀಯರಾದ ಎಂ.ಎಸ್.ಕೃಷ್ಣ ಮಾತನಾಡಿ, ಇಂದಿರಾ ಕ್ಯಾಂಟೀನ್ ತೆರೆಯುವುದಕ್ಕೆ ನಮ್ಮ ವಿರೋಧವಿಲ್ಲ. ಸಂತೆಗೆ ತೆರಳುವ ಹೆಸಗಲ್ ರಸ್ತೆಯಲ್ಲಿ 13 ಗುಂಟೆ ಗ್ರಾಮ ಠಾಣಾ ಜಾಗವಿದೆ. ಇಂದಿರಾ ಕ್ಯಾಂಟೀನ್ ನಿರ್ಮಿಸಿದರೆ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಅಲ್ಲದೆ ತ್ಯಾಜ್ಯ ವಸ್ತು ಹೊರ ಹಾಕಲು ಉತ್ತಮ ಚರಂಡಿಯಿದೆ. ಅಲ್ಲಿಯೇ ನಿರ್ಮಿಸಬೇಕೆಂದು ಜಿಲ್ಲಾಧಿಕಾರಿಗಳು ಕೂಡ ಸೂಚಿಸಿದ್ದಾರೆ. ಆದರೂ ಪಿಡಬ್ಲೂಡಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿ, ಕಾಂಪೌಂಡ್ ಒಡೆಯುವ ಮೂಲಕ ಇಂದಿರಾ ಕ್ಯಾಂಟೀನ್ ತೆರೆಯಲು ಮುಂದಾಗಿದ್ದಾರೆ ಎಂದು ದೂರಿದರು.

ಇಂದಿರಾ ಕ್ಯಾಂಟಿನ್ ತೆರೆಯಲು ಸ್ಥಳ ಸ್ವಚ್ಛತೆ ಮತ್ತು ಸಮತಟ್ಟು ಮಾಡಲು ಬೆಂಗಳೂರಿನ ಗುತ್ತಿಗೆದಾರ ಟೆಂಡರ್ ಪಡೆದಿದ್ದಾನೆ. ಆದರೆ ಪಟ್ಟಣ ಪಂಚಾಯಿತಿಯವರು ಯಾಕೆ ಈ ಕೆಲಸ ಮಾಡಲು ಮುಂದಾಗಿದ್ದಾರೆಂದು ನಮಗೆ ತಿಳಿಯುತ್ತಿಲ್ಲ. ಇದರಲ್ಲಿ ಪಿಡಬ್ಲೂಡಿ ಇಲಾಖೆ ಅಧಿಕಾರಿ ಕೂಡ ಶಾಮೀಲಾಗಿದ್ದಾರೆಂಬುದು ಸಂಶಯವಿದೆ. ಇಂದಿರಾ ಕ್ಯಾಂಟೀನ್ ತೆರೆಯಲು ಮೊದಲೇ ಜಾಗವನ್ನು ಸಮತಟ್ಟಾಗಿ ಮಾಡಲಾಗಿದೆ. ಇದೀಗ ಪ.ಪಂ.ಯವರು ಇಲಾಖೆಯ ಜೆಸಿಬಿ ಬಳಸಿ ಕಾಂಪೌಂಡ್ ಹೊಡೆಯಲು ಮುಂದಾಗಿದ್ದಾರೆ. ಇವರಿಗೂ ಇಂದಿರಾ ಕ್ಯಾಂಟೀನ್ ಗೂ ಏನು ಸಂಬಂಧ ಎಂದು ಪ್ರಶ್ನಿಸಿದ ಅವರು, ಇಂದಿರಾ ಕ್ಯಾಂಟೀನ್ ನನ್ನು ಇಲ್ಲಿ ತೆರೆಯಲು ಮುಂದಾದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ನಂತರ ಪಟ್ಟಣ ಪಂಚಾಯಿತಿಯ ಜೆಸಿಬಿಯನ್ನು ಅಧಿಕಾರಿಗಳು ವಾಪಸ್ ಕರೆಸಿಕೊಂಡರು.

Desk

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

5 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

23 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

41 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

56 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago