ಬೆಂಗಳೂರು, ;ನಾಳೆಯಿಂದ ಸೆ.3ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ಟಿಸಿ ಅವಕಾಶ ಮಾಡಿಕೊಟ್ಟಿದೆ.
ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ಪರೀಕ್ಷಾ ಕೇಂದ್ರದಿಂದ ಮನೆಗೆ ಹಿಂದಿರುಗುವಾಗ ದ್ವಿತೀಯ ಪಿಯುಸಿ ಪ್ರವೇಶಪತ್ರವನ್ನು ತೋರಿಸಿ ಕೆಎಸ್ಆರ್ಟಿಸಿ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗಧೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸಂಬಂಧ ಕೆಎಸ್ಆರ್ಟಿಸಿಯ ಎಲ್ಲ ಚಾಲಕ, ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡಲು ಎಲ್ಲ ಹಿರಿಯ ವಿಭಾಗೀಯ ನಿಯಂತ್ರಣಾಕಾರಿಗಳಿಗೆ ಸೂಚನೆ ನೀಡಲಾಗಿದೆ.ಜೊತೆಗೆ ವಿದ್ಯಾರ್ಥಿಗಳು ಬಸ್ ಹತ್ತಲು ಮತ್ತು ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ಕೈಗೊಳ್ಳಲು ಕೆಎಸ್ಆರ್ಟಿಸಿ ಮುಖ್ಯ ಸಂಚಾರಿ ವ್ಯವಸ್ಥಾಪಕರು ನಿರ್ದೇಶನ ನೀಡಿದ್ದಾರೆ.
ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು , ಹಿಂತಿರುಗಲು ಕೆಎಸ್ಆರ್ಟಿಸಿ ಉಚಿತ ಪ್ರಯಾಣ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.