ಮಂಗಳೂರು: ಇಲ್ಲಿನ ಪ್ರಸಿದ್ಧ ಐಸ್ ಕ್ರೀಂ ಮಾರಾಟ ಕಂಪೆನಿ ಪಬ್ಬಾಸ್ ಐಡಿಯಲ್ ಕೆಫೆಯು ಟೋಕಿಯೋ ಒಲಿಂಪಿಕ್ ನಲ್ಲಿ ನಡೆದ ಬ್ಯಾಡ್ಮಿಂಟನ್ ಆಟದಲ್ಲಿ ಕಂಚಿನ ಪದಕ ಜಯಿಸಿರುವ ಆಟಗಾರ್ತಿ ಪಿ.ವಿ.ಸಿಂಧು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಐಸ್ ಕ್ರೀಂ ಟ್ರೀಟ್ ನೀಡುವುದಾಗಿ ಟ್ವೀಟ್ ಮಾಡಿ ಪಬ್ಬಾಸ್ ಎಲ್ಲರ ಗಮನ ಸೆಳೆದಿದೆ.
ಈ ಹಿಂದೆ ಪ್ರಧಾನಿ ಮೋದಿಯವರು ಪಿ.ವಿ. ಸಿಂಧು ಅವರಿಗೆ ಒಲಿಂಪಿಕ್ ನಲ್ಲಿ ಬ್ಯಾಡ್ಮಿಂಟನ್ ಆಟದಲ್ಲಿ ಪದಕ ಗೆದ್ದು ಬಂದಲ್ಲಿ ಜೊತೆಯಾಗಿ ಐಸ್ ಕ್ರೀಂ ಸವಿಯೋಣ ಎಂದು ಆಫರ್ ನೀಡಿದ್ದರು. ಇದೀಗ ಪಿ.ವಿ. ಸಿಂಧು ಕಂಚಿನ ಪದಕ ಗೆದ್ದು ಬಂದಿದ್ದಾರೆ. ಹೀಗಾಗಿ ಮೋದಿಯವರು ಮತ್ತೆ ಟ್ವೀಟ್ ಮಾಡಿ ಐಸ್ ಕ್ರೀಂ ಸವಿಯುವ ವಿಚಾರವನ್ನು ನೆನಪಿಸಿದ್ದಾರೆ. ಪ್ರಧಾನಿ ಟ್ವೀಟ್ ಬೆನ್ನಲ್ಲೇ ಈ ಐಸ್ ಕ್ರೀಂ ಅನ್ನು ತಾವು ಒದಗಿಸುತ್ತೇವೆ ಎಂದು ಮಂಗಳೂರಿನ ಪ್ರಸಿದ್ಧ ಐಸ್ ಕ್ರೀಂ ಪಾರ್ಲರ್ ಪಬ್ಬಾಸ್ ಐಡಿಯಲ್ ಕೆಫೆ ಟ್ವೀಟ್ ಮಾಡಿದೆ. ಟ್ವೀಟ್ ನಲ್ಲಿ ಕೆಫೆಯು ‘ಆತ್ಮೀಯ ಮೋದಿಯವರೇ, ತಾವು ಪಿ.ವಿ.ಸಿಂಧು ಅವರಿಗೆ ಭರವಸೆ ನೀಡಿದ್ದೀರಿ. ಈಗ ಅವರು ಪದಕ ಗೆದ್ದು ಬಂದಿದ್ದಾರೆ. ಭಾರತದ ಶ್ರೇಷ್ಠ ಬ್ಯಾಡ್ಮಿಂಟನ್ ಆಟಗಾರ್ತಿಯೊಂದಿಗೆ ನಿಮಗೂ ಅತ್ಯುತ್ತಮ ಐಸ್ ಕ್ರೀಂ ನೀಡಿ ಸಂಭ್ರಮಿಸಲು ಉತ್ಸುಕರಾಗಿದ್ದೇವೆ’ ಎಂದಿದೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…