News Karnataka Kannada
Friday, May 03 2024
ಕರ್ನಾಟಕ

ಪ್ರವಾಸಿಗರ ಚಿನ್ನಾಭರಣ ಕಳ್ಳಿಯ ಬಂಧನ

Karnataka Police
Photo Credit :

ಬೆಂಗಳೂರು ;ಕುಕ್ಕೆ ಸುಬ್ರಮಣ್ಯಕ್ಕೆ ಪ್ರವಾಸಿಗರ ಸೋಗಿನಲ್ಲಿ ಹೋಗಿ ಅಲ್ಲಿಗೆ ಬಂದಿದ್ದ ಪ್ರವಾಸಿಗರ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಖತರ್ನಾಕ್ ಮಹಿಳೆಯನ್ನು ಬಂಧಿಸಿರುವ ಯಶವಂತಪುರ ಪೊಲೀಸರು ೨೦.೨ ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಆಂಧ್ರಪ್ರದೇಶದ ಬಂಧಿತ ಮಹಿಳೆಯು ನಗರದ ಚಿನ್ನಾಭರಣ ಅಂಗಡಿಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ೨೦.೨ ಲಕ್ಷ ಮೌಲ್ಯದ ೪೩೯ ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಆತನ ಸ್ನೇಹಿತನಿಗಾಗಿ ಶೋಧ ನಡೆಸಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.
ಕಳೆದ ೨೫ ರಂದು ಬೆಳಿಗ್ಗೆ ೧೦ರ ವೇಳೆ ಯಶವಂತಪುರ ಎಸ್‌ಕೆ ಜ್ಯುವೆಲರಿ ಬಳಿ ಬಂಧಿತ ಮಹಿಳೆಯು ವ್ಯಕ್ತಿ ಯೊಬ್ಬನ ಜತೆ ಶಂಕಾಸ್ಪದವಾಗಿ ಓಡಾಡುತ್ತಿದ್ದಾಗ ಅಪರಾಧ ಸಿಬ್ಬಂದಿ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಹೋದಾಗ ವ್ಯಕ್ತಿಯು ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಮಹಿಳೆಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಆಂಧ್ರ ಮೂಲದ ಆಕೆಯ ಬಳಿ ನಗರದ ವಿವಿಧ ಚಿನ್ನದಂಗಡಿಗಳಲ್ಲಿ ಅಡಮಾನವಿಟ್ಟಿರುವ ೧೦ ರಸೀದಿಗಳು, ೪ ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಕೂಡಲೇ ಆಕೆಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಆಕೆಯ ಪತಿ ೨ ವರ್ಷಗಳ ಹಿಂದೆ ಮೃತಪಟ್ಟಿರುವುದು ಪತ್ತೆಯಾಗಿದೆ. ಆಕೆಯೂ ಪರಾರಿಯಾಗಿರುವ ಯುವಕನ ಜತೆ ೨ನೇ ಮದುವೆಯಾಗಿ ಆತನೊಂದಿಗೆ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯಕ್ಕೆ ಹೋಗಿ ದೇವರ ದರ್ಶನ ಮಾಡಲು ಹೋಗಿದ್ದಾಗ ಕುಕ್ಕೆ ಸುಬ್ರಮಣ್ಯದ ಹೋಟೆಲ್‌ವೊಂದರಲ್ಲಿ ಪ್ರವಾಸಿಗರೊಬ್ಬರು ಟೇಬಲ್ ಮೇಲೆ ಇಟ್ಟಿದ್ದ ಬ್ಯಾಗ್‌ನ್ನು ದೋಚಿ ನಗರಕ್ಕೆ ವಾಪಸ್ಸಾಗಿ ಅವುಗಳನ್ನು ಮಾರಾಟ ಮಾಡಿದ್ದನ್ನು ಬಾಯ್ಬಿಟ್ಟಿದ್ದಾಳೆ. ಆರೋಪಿಯು ಮದುವೆಯಾಗಿರುವುದಾಗಿ ಹಏಳಿದ ಯುವಕನ ಜತೆ ಲಗ್ಗೆರೆಯಲ್ಲಿ ರೂಂ ಒಂದನ್ನು ಬಾಡಿಗೆಗೆ ಪಡೆದು ವಾಸಿಸುತ್ತಿದ್ದು, ಯಶವಂತಪುರ ಇನ್ಸ್‌ಪೆಕ್ಟರ್ ಸುರೇಶ್ ಮತ್ತವರ ಸಿಬ್ಬಂದಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು