ಬಂಟ್ವಾಳ: ಮನೇಲ ಕ್ರಿಸ್ತರಾಜ ದೇವಾಲಯಕ್ಕೆ ಸೇರಿದ ಕ್ರೈಸ್ತ ದೇವರ ಮೂರ್ತಿಯ ಗ್ರೋಟ್ಟೊವನ್ನು ದುಷ್ಕರ್ಮಿಗಳು ಹಾನಿಗೊಳಿಸಿದ ಘಟನೆ ವಿಟ್ಲ ಸಮೀಪದ ಪುಣಚ- ತೋರಣಕಟ್ಟೆ ಎಂಬಲ್ಲಿ ಶನಿವಾರ ನಡೆದಿದೆ.
ಇಲ್ಲಿನ ತೋರಣಕಟ್ಟೆ ರಸ್ತೆಯಲ್ಲಿರುವ ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ್ದು, ಗ್ರೋಟ್ಟೊವಿನ ಹೊರಗಿನ ಗಾಜು ಪುಡಿಯಾಗಿದೆ.
ಇಂದು ಬೆಳಗ್ಗೆ ೧೦.೩೦ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಟ್ಲ ಠಾಣಾಧಿಕಾರಿ ಯಲ್ಲಪ್ಪ ಅವರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಧರ್ಮಗುರು ಆಗ್ರಹಿಸಿದ್ದಾರೆ. ಈ ಸಂಬಂಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.