ಹುಬ್ಬಳ್ಳಿ: ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆಯಲ್ಲಿ ರಾಜಕೀಯ ನಾಯಕರ ಟಾಕ್ ವಾರ್ ಮುಂದುವರೆದಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ವಾಗ್ದಾಳಿ ನಡೆಸೋದು ಒಂದೆಡೆಯಾದ್ರೇ.. ರಾಜಕೀಯ ನಾಯಕರು ಭವಿಷ್ಯ ನುಡಿಯೋದು ಮತ್ತೊಂದೆಡೆಯಾಗಿದೆ. ಹಾನಗಲ್ ನಲ್ಲಿ ಬಿಜೆಪಿ ಅಭ್ಯರ್ಥಿ ಸೋಲನಪ್ಪಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಈ ಕುರಿತಂತೆ ನಗರದಲ್ಲಿ ಮಾತನಾಡಿದಂತ ಅವರು, ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲೋದು ಖಚಿತ. ಈ ವಿಷಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರಿಗೆ, ಸಚಿವ ಮುರುಗೇಶ್ ನಿರಾಣಿಗೂ ಗೊತ್ತು ಎಂಬುದಾಗಿ ಹೇಳಿದರು.
ಮುಂದುವರೆದು ಮಾತನಾಡಿದಂತ ಅವರು, ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲೋದು ಖಚಿತಗೊಂಡ ನಂತ್ರ, ಬಿಜೆಪಿ ಪಕ್ಷದವರು ವಾಮಮಾರ್ಗದ ಮೂಲಕ ಗೆಲ್ಲೋದಕ್ಕೆ ಮುಂದಾಗಿದ್ದಾರೆ. ಇದಕ್ಕಾಗಿ ಹಣ ಹಂಚಿಕೆ ಮೂಲಕ ಮತದಾರರನ್ನು ಸೆಳೆದು ಗೆಲ್ಲೋ ಪ್ರಯತ್ನ ನಡೆಸಿದ್ದಾರೆ. ಈ ಬಗ್ಗೆ ಕ್ಷೇತ್ರದ ಜನರೇ ಹೇಳುತ್ತಿದ್ದಾರೆ ಎಂದರು.
ಬಿಜೆಪಿಯವರು ಸುಳ್ಳು ಭರವಸೆಗಳನ್ನು ನೀಡೋದ್ರಲ್ಲಿ ನಿಸ್ಸೀಮರು. ಅವರ ಬಳಿ ಸಾಧನೆ ಬಗ್ಗೆ ಮಾತನಾಡಿ ಮತ ಯಾಚಿಸೋದಕ್ಕೆ ಏನ್ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ.? ಬಿಜೆಪಿ ಸರ್ಕಾರ ಅಭಿವೃದ್ಧಿಯಲ್ಲಿ ಸಾಧನೆ ಶೂನ್ಯವಾಗಿದೆ ಎಂದರು.