News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಬಿಜೆಪಿ ಅಭ್ಯರ್ಥಿ ಸೋಲೋದು ಖಚಿತ- ಮಾಜಿ ಸಿಎಂ ಸಿದ್ಧರಾಮಯ್ಯ

Siddaramaiah Bang 17 6 21 No 176218 Newsk 3471785224
Photo Credit :

ಹುಬ್ಬಳ್ಳಿ: ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆಯಲ್ಲಿ   ರಾಜಕೀಯ ನಾಯಕರ ಟಾಕ್ ವಾರ್ ಮುಂದುವರೆದಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ವಾಗ್ದಾಳಿ ನಡೆಸೋದು ಒಂದೆಡೆಯಾದ್ರೇ.. ರಾಜಕೀಯ ನಾಯಕರು ಭವಿಷ್ಯ ನುಡಿಯೋದು ಮತ್ತೊಂದೆಡೆಯಾಗಿದೆ. ಹಾನಗಲ್ ನಲ್ಲಿ ಬಿಜೆಪಿ ಅಭ್ಯರ್ಥಿ ಸೋಲನಪ್ಪಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಈ ಕುರಿತಂತೆ ನಗರದಲ್ಲಿ ಮಾತನಾಡಿದಂತ ಅವರು, ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲೋದು ಖಚಿತ. ಈ ವಿಷಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರಿಗೆ, ಸಚಿವ ಮುರುಗೇಶ್ ನಿರಾಣಿಗೂ ಗೊತ್ತು ಎಂಬುದಾಗಿ ಹೇಳಿದರು.

ಮುಂದುವರೆದು ಮಾತನಾಡಿದಂತ ಅವರು, ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲೋದು ಖಚಿತಗೊಂಡ ನಂತ್ರ, ಬಿಜೆಪಿ ಪಕ್ಷದವರು ವಾಮಮಾರ್ಗದ ಮೂಲಕ ಗೆಲ್ಲೋದಕ್ಕೆ ಮುಂದಾಗಿದ್ದಾರೆ. ಇದಕ್ಕಾಗಿ ಹಣ ಹಂಚಿಕೆ ಮೂಲಕ ಮತದಾರರನ್ನು ಸೆಳೆದು ಗೆಲ್ಲೋ ಪ್ರಯತ್ನ ನಡೆಸಿದ್ದಾರೆ. ಈ ಬಗ್ಗೆ ಕ್ಷೇತ್ರದ ಜನರೇ ಹೇಳುತ್ತಿದ್ದಾರೆ ಎಂದರು.

ಬಿಜೆಪಿಯವರು ಸುಳ್ಳು ಭರವಸೆಗಳನ್ನು ನೀಡೋದ್ರಲ್ಲಿ ನಿಸ್ಸೀಮರು. ಅವರ ಬಳಿ ಸಾಧನೆ ಬಗ್ಗೆ ಮಾತನಾಡಿ ಮತ ಯಾಚಿಸೋದಕ್ಕೆ ಏನ್ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ.? ಬಿಜೆಪಿ ಸರ್ಕಾರ ಅಭಿವೃದ್ಧಿಯಲ್ಲಿ ಸಾಧನೆ ಶೂನ್ಯವಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು