ಬೆಂಗಳೂರು ;ರಾಜ್ಯದ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್ ಇದೇ ತಿಂಗಳ 30 ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, 4 ದಿನಗಳ ಕಾಲ ಅವರು ಪಕ್ಷ ಸಂಘಟನೆ ಸಂಬಂಧ ಪ್ರವಾಸ ಕೈಗೊಳ್ಳಲಿದ್ದಾರೆ.
ಇದೇ ತಿಂಗಳ 30 ರಂದು ರಾಜ್ಯಕ್ಕೆ ಆಗಮಿಸಲಿರುವ ಅರುಣ್ಸಿಂಗ್, ಸೆಪ್ಟೆಂಬರ್ 3ರವರೆಗೂ ಹಳೆ ಮೈಸೂರು ಜಿಲ್ಲೆಗಳಲ್ಲಿ ಸಂಘಟನಾತ್ಮಕ ಪ್ರವಾಸ ನಡೆಸುವರು.
ರಾಜ್ಯದಲ್ಲಿ 4 ದಿನಗಳ ಕಾಲ ವಾಸ್ತವ್ಯ ಹೂಡಲಿರುವ ಅರುಣ್ಸಿಂಗ್, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಜಿಲ್ಲಾ ಮುಖಂಡರ ಸಭೆ ನಡೆಸುವರು.ರಾಜ್ಯದಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಅರುಣ್ಸಿಂಗ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ನಾಯಕತ್ವ ಬದಲಾವಣೆಯ ವಿಚಾರ ಬಿಜೆಪಿಯಲ್ಲಿ ತಾರಕಕ್ಕೇರಿದ್ದಾಗ ಬೆಂಗಳೂರಿಗೆ ಬಂದಿದ್ದ ಅರುಣ್ಸಿಂಗ್, ಸಚಿವರು ಹಾಗೂ ಶಾಸಕರ ಭೇಟಿ ಮಾಡಿ ನಾಯಕತ್ವ ಬದಲಾವಣೆ ಇಲ್ಲ ಎಂದೂ ಹೇಳಿ ದೆಹಲಿಗೆ ತೆರಳಿದ್ದರು.
ಬಿಜೆಪಿ ಪಕ್ಷದ ಸಂಘಟನೆಗೆ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಪ್ರವಾಸ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.