ಬೆಂಗಳೂರು, ; ಬಿಜೆಪಿ ಎಂಬ ಸುಳ್ಳಿನ ಫ್ಯಾಕ್ಟರಿ ಉತ್ಪಾದಿಸಿ, ಹಂಚುತ್ತಿರುವ ಸುಳ್ಳುಗಳ ಕುರಿತು ಜನರಿಗೆ ಸತ್ಯ ಹೇಳುವುದರ ಜೊತೆಗೆ ಅರಿವು ಮೂಡಿಸುವಂತೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ರಚನಾತ್ಮಕ ಹೋರಾಟದ ಮೂಲಕ ಮನುಷ್ಯ ವಿರೋಧಿಯಾದ ಬಿಜೆಪಿಯ ಕ್ರೂರ ಹುನ್ನಾರಗಳನ್ನು ಬಯಲಿಗೆಳೆದು ಸೋಲಿಸುವುದೆ ಇಂದಿನ ಎಲ್ಲ ಸಮಸ್ಯೆಗಳಿಗೆ ಇರುವ ನಿಜವಾದ ಪರಿಹಾರ. ಹಾಗೆ ಮಾಡಬೇಕೆಂದರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಷಯಗಳನ್ನು ಅಧ್ಯಯನ ಮಾಡಿ ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದು ಜಿಲ್ಲಾ ಅಧ್ಯಕ್ಷರಿಗೆ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.
ನಾನು ಬರೆದಿರುವ ಜನಪೀಡಕ ಸರ್ಕಾರ, ಐದು ಕಾಯ್ದೆಗಳು- ಅಸಂಖ್ಯಾತ ಸುಳ್ಳುಗಳು, ಮತ್ತು ಪೆಟ್ರೋಲï-ಡೀಸೆಲ್ ನೂರು -ಜನರ ಬದುಕು ನುಚ್ಚು ನೂರು ಎಂಬ ಕಿರು ಪುಸ್ತಕಗಳನ್ನು ತಮ್ಮ ಓದಿಗಾಗಿ ಕಳಿಸುತ್ತಿದ್ದೇನೆ. ತಾವುಗಳು ಈ ವಿಚಾರಗಳನ್ನು ಓದಿ, ಕಿರು ಪುಸ್ತಕಗಳ ಕೊರತೆಯಾದರೆ ಪಕ್ಷದ ಶಿಷ್ಟಾಚಾರದಂತೆ ಮುದ್ರಿಸಿಕೊಂಡು ಎಲ್ಲ ಬೂತು ಮಟ್ಟದ ಕಾರ್ಯಕರ್ತರೂ ಓದುವಂತೆ ಮಾಡಿ ಜನರನ್ನು ನಿಜದ ಬೆಳಕಿನ ಕಡೆಗೆ ಮುನ್ನಡೆಸಬೇಕೆಂದು ಅವರು ಕೋರಿದ್ದಾರೆ.
ಬಿಜೆಪಿ ಸುಳ್ಳಿನ ಫ್ಯಾಕ್ಟರಿ ; ಸಿದ್ದರಾಮಯ್ಯ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.