Categories: ಕರ್ನಾಟಕ

ಬಿಜೆಪಿ ಸುಳ್ಳಿನ ಫ್ಯಾಕ್ಟರಿ ; ಸಿದ್ದರಾಮಯ್ಯ

ಬೆಂಗಳೂರು, ; ಬಿಜೆಪಿ ಎಂಬ ಸುಳ್ಳಿನ ಫ್ಯಾಕ್ಟರಿ ಉತ್ಪಾದಿಸಿ, ಹಂಚುತ್ತಿರುವ ಸುಳ್ಳುಗಳ ಕುರಿತು ಜನರಿಗೆ ಸತ್ಯ ಹೇಳುವುದರ ಜೊತೆಗೆ ಅರಿವು ಮೂಡಿಸುವಂತೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ರಚನಾತ್ಮಕ ಹೋರಾಟದ ಮೂಲಕ ಮನುಷ್ಯ ವಿರೋಧಿಯಾದ ಬಿಜೆಪಿಯ ಕ್ರೂರ ಹುನ್ನಾರಗಳನ್ನು ಬಯಲಿಗೆಳೆದು ಸೋಲಿಸುವುದೆ ಇಂದಿನ ಎಲ್ಲ ಸಮಸ್ಯೆಗಳಿಗೆ ಇರುವ ನಿಜವಾದ ಪರಿಹಾರ. ಹಾಗೆ ಮಾಡಬೇಕೆಂದರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಷಯಗಳನ್ನು ಅಧ್ಯಯನ ಮಾಡಿ ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದು ಜಿಲ್ಲಾ ಅಧ್ಯಕ್ಷರಿಗೆ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.
ನಾನು ಬರೆದಿರುವ ಜನಪೀಡಕ ಸರ್ಕಾರ, ಐದು ಕಾಯ್ದೆಗಳು- ಅಸಂಖ್ಯಾತ ಸುಳ್ಳುಗಳು, ಮತ್ತು ಪೆಟ್ರೋಲï-ಡೀಸೆಲ್ ನೂರು -ಜನರ ಬದುಕು ನುಚ್ಚು ನೂರು ಎಂಬ ಕಿರು ಪುಸ್ತಕಗಳನ್ನು ತಮ್ಮ ಓದಿಗಾಗಿ ಕಳಿಸುತ್ತಿದ್ದೇನೆ. ತಾವುಗಳು ಈ ವಿಚಾರಗಳನ್ನು ಓದಿ, ಕಿರು ಪುಸ್ತಕಗಳ ಕೊರತೆಯಾದರೆ ಪಕ್ಷದ ಶಿಷ್ಟಾಚಾರದಂತೆ ಮುದ್ರಿಸಿಕೊಂಡು ಎಲ್ಲ ಬೂತು ಮಟ್ಟದ ಕಾರ್ಯಕರ್ತರೂ ಓದುವಂತೆ ಮಾಡಿ ಜನರನ್ನು ನಿಜದ ಬೆಳಕಿನ ಕಡೆಗೆ ಮುನ್ನಡೆಸಬೇಕೆಂದು ಅವರು ಕೋರಿದ್ದಾರೆ.

Indresh KC

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago