ಕಾಸರಗೋಡು: ಲಾರಿ ಮತ್ತು ಬುಲೆಟ್ ಬೈಕ್ ಡಿಕ್ಕಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಚೌಕಿ ಕಲ್ಲಂಗೈಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಮೂಲತಃ ಕುಂದಾಪುರದ ಪ್ರಸ್ತುತ ಭೀಮನಡಿಯಲ್ಲಿ ವಾಸವಾಗಿರುವ ಎಂ.ಪಿ. ಲೂಕಚ್ಚನ್ (53) ಮತ್ತು ಭೀಮನಡಿಯ ವಿಜಯನ್ (38) ಎಂದು ಗುರುತಿಸಲಾಗಿದೆ.
ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ.
ಕುಂದಾಪುರಕ್ಕೆ ತೆರಳಿ ಅಲ್ಲಿಂದ ಕಾಸರಗೋಡಿನ ಭೀಮನಡಿಗೆ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಇಬ್ಬರು ಸ್ನೇಹಿತರಾಗಿದ್ದು, ವಿಜಯನ್ ಭೀಮನಡಿಯಲ್ಲಿ ಹೋಟೆಲ್ ನೌಕರನಾಗಿದ್ದನೆನ್ನಲಾಗಿದೆ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.
ಕಾಸರಗೋಡು ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.