News Karnataka Kannada
Friday, May 10 2024
ಕರ್ನಾಟಕ

ಬೃಹತ್ ಮರ ಬಿದ್ದು ಅರಣ್ಯ ಪಾಲಕ ಮೃತ್ಯು

Photo Credit :

ಬೃಹತ್ ಮರ ಬಿದ್ದು ಅರಣ್ಯ ಪಾಲಕ ಮೃತ್ಯು

ಕಾರವಾರ: ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಕರ್ತವ್ಯದಲ್ಲಿದ್ದ ಅರಣ್ಯ ರಕ್ಷಕ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಾವಿನಗುಂಡಿ ರಸ್ತೆಯ ಕುಳಿಬಿಡು ಎಂಬಲ್ಲಿ ಮಂಗಳವಾರ ಸಂಭವಿಸಿದೆ.

ಅರಣ್ಯ ರಕ್ಷಕ ಶಶಿಧರ್ (58) ಘಟನೆಯಲ್ಲಿ ಮೃತಪಟ್ಟ ಅಧಿಕಾರಿ. ಕರ್ತವ್ಯದಲ್ಲಿದ್ದ ಅವರು ಬೈಕ್ ಮೇಲೆ‌ ಸಾಗುತ್ತಿದ್ದಾಗ ಗಾಳಿಯ ರಭಸಕ್ಕೆ ಬೃಹತ್ ಮರ ಶಶಿಧರ್ ಅವರ ಮೇಲೆ ಬಿದ್ದಿದೆ. ಇದರಿಂದ‌ ಅವರು‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅವರ ಬೈಕ್ ಸಹ ಸಂಪೂರ್ಣ ನುಜ್ಜುಗುಜ್ಜಾಗಿದೆ. ರಸ್ತೆ ಸಂಚಾರ ಬಂದ್ ಆಗಿದ್ದು ಅರಣ್ಯ ಇಲಾಖೆಯವರು, ಸ್ಥಳೀಯರ ಸಹಕಾರದಿಂದ ಮರ ತೆರವು ಕಾರ್ಯಾಚರಣೆ ಆರಂಭಗೊಂಡಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು