News Karnataka Kannada
Sunday, May 12 2024
ಕರ್ನಾಟಕ

ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಖಂಡನೆ : ಮಡಿಕೇರಿಯಲ್ಲಿ ಬಿಎಸ್‍ಪಿ ಪ್ರತಿಭಟನೆ

Photo Credit :

ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಖಂಡನೆ : ಮಡಿಕೇರಿಯಲ್ಲಿ ಬಿಎಸ್‍ಪಿ ಪ್ರತಿಭಟನೆ

ಮಡಿಕೇರಿ: ಗುಂಡ್ಲುಪೇಟೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಯುವಕನನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಮತ್ತು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಬಹುಜನ ಸಮಾಜ ಪಾರ್ಟಿ ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಬಿಎಸ್‍ಪಿ ಕಾರ್ಯಕರ್ತರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.

ಗುಂಡ್ಲುಪೇಟೆಯ ಶ್ಯಾನಾಡ್ರಹಳ್ಳಿ ನಿವಾಸಿಯಾದ ಎಸ್. ಪ್ರತಾಪ್ ಎಂಬಾತ ಐ.ಎ.ಎಸ್. ಪರೀಕ್ಷೆಯನ್ನು ಬರೆಯಲು ಮೈಸೂರಿಗೆ ತೆರಳಿದ್ದ. ತಡವಾದ ಕಾರಣ ಪರೀಕ್ಷೆ ಬರೆಯಲಾಗದೆ ಮೈಸೂರಿನಲ್ಲೇ ಕಾಲಕಳೆದು ನಂತರ ಗುಂಡ್ಲುಪೇಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿರುವ ಸಂದರ್ಭ ರಾಘವಾಪುರ ಗ್ರಾಮದ ಬಳಿ ಬೈಕ್ ಕೆಟ್ಟು ಹೋಗಿದೆ.

ರಾತ್ರಿ ಅಲ್ಲೇ ಕಾಲ ಕಳೆದು ಬೆಳಿಗ್ಗೆ ವೀರನಪುರದ ಶನಿಮಹಾತ್ಮ ದೇವಾಲಯಕ್ಕೆ ತೆರಳಿದ ಸಂದರ್ಭ ಈತನನ್ನು ಕಂಡ ಆರ್ಚಕರು ಈತನ ಶಂಕೆ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರ ಗುಂಪು ಈತನ ಬಗ್ಗೆ ವಿಚಾರಿಸಿದಾಗ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯೆಂದು ತಿಳಿದ ನಂತರ ಹಲ್ಲೆ ನಡೆಸಿ ದೇವಸ್ಥಾನದಿಂದ ಊಟಿ- ಮೈಸೂರು ರಸ್ತೆಯವರೆಗೂ ಬೆತ್ತಲೆ ಮೆರವಣಿಗೆಯನ್ನು ಮಾಡಿದ್ದಾರೆ ಎಂದು ಆರೋಪಿಸಿದ ಬಿಎಸ್‍ಪಿ ಜಿಲ್ಲಾಧ್ಯಕ್ಷ ಮೋಹನ್ ಮೌರ್ಯ ಹೇಯ ಕೃತ್ಯವನ್ನು ಖಂಡಿಸುವುದಾಗಿ ತಿಳಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವ ಮೂಲಕ ಇನ್ನು ಮುಂದೆ ಈ ರೀತಿಯ ಕೃತ್ಯಗಳು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದರು.

ಜಿಲ್ಲಾ ವಕ್ತಾರ ಬಸವರಾಜ್, ಖಜಾಂಚಿ ಹೆಚ್.ಎಸ್.ದಿಲೀಪ್ ಕುಮಾರ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪೂವಣ್ಣಿ, ನಗರ ಪ್ರಧಾನ ಕಾರ್ಯದರ್ಶಿ ಗಣೇಶ್, ಪ್ರಮುಖರಾದ ದೊರೆ ಮಣಿ, ಗಣೇಶ್, ಆನೆರಾಜು, ಜಯರಾಮ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು