ಬೆಳಗಾವಿ: ಹೊರವಲಯದ ಮಾರ್ಕಂಡೇಯ ನಗರದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮಂಗಳವಾರ ತಡರಾತ್ರಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
‘ಮೂಲತಃ ತಾಲ್ಲೂಕಿನ ಬೆಳಗುಂದಿಯವನಾದ ಈ ಬಾಲಕ, ಸಂಬಂಧಿಕರ ಮನೆಯಲ್ಲಿದ್ದುಕೊಂಡು ಸ್ಥಳೀಯ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ ತಡರಾತ್ರಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಓದುವುದು ತಲೆಗೆ ಹತ್ತುತ್ತಿಲ್ಲ ಎನ್ನುತ್ತಿದ್ದ ಎಂದು ಪೋಷಕರು ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.
ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.