ನವದೆಹಲಿ: ನಾನು ಬಂಡಾಯ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಸಿ.ಪಿ.ಯೋಗೇಶ್ವರ್ ಅವರ ಪರ ನಿಲ್ಲಲಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ನನ್ನ ಬೆಂಬಲವಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ಒಳ್ಳೆಯ ಸರ್ಕಾರ ನೀಡಲಿ, 20 ತಿಂಗಳು ಉತ್ತಮ ಆಡಳಿತ ನೀಡುವ ನಿರೀಕ್ಷೆ ಇದೆ. ನಾನು ಬಂಡಾಯಗಾರಾದ ರಮೇಶ್ ಜಾರಕಿಹೋಳಿ, ಸಿ.ಪಿ.ಯೋಗೇಶ್ವರ್ ಜೊತೆಗಿಲ್ಲ. ಬೊಮ್ಮಾಯಿಯವರಿಗೆ ನನ್ನ ಬೆಂಬಲವಿದೆ. ಆನಂದ್ ಸಿಂಗ್ ಅವರು ವಾಪಸ್ ಕಾಂಗ್ರೆಸ್ ಸೇರುತ್ತಾರೆ ಎಂಬುದು ಗಾಳಿ ಮಾತು. ಯಾರೂ ಕಾಂಗ್ರೆಸ್ ಗೆ ವಾಪಸ್ ಆಗುವುದಿಲ್ಲ. ಬಿಜೆಪಿಯಿಂದಲೇ ಚುನಾವಣೆ ಸ್ಪರ್ಧೆ ಮಾಡಲಿದ್ದಾರೆ ಎಂದರು.
ಮಂತ್ರಿಯಾಗಿರುವ ಸ್ನೇಹಿತರು ಅನಾವಶ್ಯಕ ಗೊಂದಲ ಮೂಡಿಸುವುದು ಸರಿಯಲ್ಲ, ಎಲ್ಲವೂ ಪ್ರಮುಖ ಖಾತೆ, ಅದನ್ನು ನಿಭಾಯಿಸುವುದು ಮುಖ್ಯ. ಸಿಕ್ಕಿರುವ ಖಾತೆಯ ಮೂಲಕ ಅಭಿವೃದ್ಧಿ ಮಾಡುವ ಬಗ್ಗೆ ಅಧ್ಯಯನ ಮಾಡಬೇಕು. ಅನಾವಶ್ಯಕ ಗೊಂದಲಗಳಿಂದ ಯಾರಿಗೂ ಲಾಭ ಇಲ್ಲ. ಆಡಳಿತದ ದೃಷ್ಟಿಯಿಂದ ಖಾತೆಗಳನ್ನು ವಹಿಸಿಕೊಂಡು, ಪ್ರಮಾಣಿಕವಾಗಿ ಕೆಲಸ ಮಾಡಬೇಕು. 20 ತಿಂಗಳಲ್ಲಿ ಚುನಾವಣೆ ಇದೆ, ಸಮಯ ಕಡಿಮೆ ಇದೆ, ವೇಗವಾಗಿ ಕೆಲಸ ಮಾಡಬೇಕಿದೆ. ಖಾತೆ ಗೊಂದಲ ಇಟ್ಟುಕೊಂಡು ಸಮಯ ವ್ಯರ್ಥ ಮಾಡಬಾರದು ಎಂದು ಸಲಹೆ ನೀಡಿದರು.
ಬೊಮ್ಮಾಯಿಗೆ ಬೆಂಬಲ ಎಂದ ಶಾಸಕ ಹೆಚ್ ವಿಶ್ವನಾಥ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.