News Karnataka Kannada
Thursday, May 02 2024
ಕರ್ನಾಟಕ

ಬೋಧಕ-ಬೋಧಕೇತರ ಸಿಬ್ಬಂದಿಗಳಿಗೆ ಆದ್ಯತೆ ಮೇಲೆ ಲಸಿಕೀಕರಣಕ್ಕೆ ಸರ್ಕಾರ ಸೂಚನೆ

Private Schools 24 7 21
Photo Credit :

ಬೆಂಗಳೂರು, – ರಾಜ್ಯದಲ್ಲಿ ಇದೇ ತಿಂಗಳ 23 ರಿಂದ 9, 10 ಮತ್ತು ಪಿಯುಸಿ ತರಗತಿಗಳು ಆರಂಭವಾಗುವುದು ನಿಶ್ಚಿತವಾಗಿದ್ದು, ಈ ವಿದ್ಯಾರ್ಥಿಗಳ ಪೋಷಕರು ಮತ್ತು ಶಾಲೆಗಳ ಬೋಧಕ-ಬೋಧಕೇತರ ಸಿಬ್ಬಂದಿಗಳಿಗೆ ಆದ್ಯತೆ ಮೇಲೆ ಲಸಿಕೀಕರಣಕ್ಕೆ ಸರ್ಕಾರ ಸೂಚನೆ ನೀಡಿದೆ.
ಆ. 23 ರಿಂದ 9. 10, ಪ್ರಥಮ ಮತ್ತು ದ್ವಿತೀಯ ಪಿಯುಸಿ ಆರಂಭಕ್ಕೆ ಸರ್ಕಾರ ತೀರ್ಮಾನ ಕೈಗೊಂಡು ಅದರಂತೆ ಶಾಲಾ-ಕಾಲೇಜುಗಳ ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡಲು ಆದ್ಯತೆ ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಬಿಬಿಎಂಪಿಯ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಈ ವಿದ್ಯಾರ್ಥಿಗಳ ಪೋಷಕರು ಲಸಿಕೆ ಪಡೆಯದೆ ಇದ್ದರೆ ಅಂತಹ ಪೋಷಕರುಗಳಿಗೂ ಆದ್ಯತೆ ಮೇಲೆ ಲಸಿಕೆ ನೀಡುವಂತೆ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳನ್ನು ನಿಯಂತ್ರಿಸಲು ಸರ್ಕಾರ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ, ರಾತ್ರಿ ಕರ್ಫ್ಯೂ ಜಾರಿ ಮಾಡಿದ ಹಿನ್ನೆಲೆಯಲ್ಲಿ ಈ ತಿಂಗಳ 23 ರಿಂದ 9. 10, ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುವ ಬಗ್ಗೆ ಗೊಂದಲಗಳಿದ್ದವು. ಈ ಎಲ್ಲ ಗೊಂದಲಗಳಿಗೆ ನಿನ್ನೆ ತೆರೆ ಎಳೆದಿದ್ದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಮೊದಲು ನಿರ್ಧಾರ ಮಾಡಿದಂತೆ ಈ ತಿಂಗಳ 23 ರಿಂದ ಶಾಲಾ-ಕಾಲೇಜುಗಳು ಆರಂಭವಾಗುತ್ತವೆ ಎಂದು ಸ್ಪಷ್ಟಪಡಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು