ಬೆಂಗಳೂರು: ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಡಹಗಲೇ ನಡೆದಿದೆ. ಕೋರಮಂಗಲ 8ನೇ ಹಂತದಲ್ಲಿರುವ ಯೂನಿಯನ್ ಬ್ಯಾಂಕ್ನಲ್ಲಿ ರೌಡಿ ಜೋಸೆಫ್ ಅಲಿಯಾಸ್ ಬಬ್ಲಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಮಾಡಲಾಗಿದೆ. ಮುಖಕ್ಕೆ ಬಟ್ಟೆ ಸುತ್ತಿಕೊಂಡು 4 ಬೈಕ್ಗಳಲ್ಲಿ ಬಂದಿದ್ದ 8 ಮಂದಿ ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಪರಾರಿಯಾಗಿರುವುದಾಗಿ ವರದಿಯಾಗಿದೆ.
ಕೊಲೆಯಾದ ಬಬ್ಲಿಯು ಬೈಕ್ ನಲ್ಲಿ ತನ್ನ ಪತ್ನಿಯ ಜತೆ ಮಾರುಕಟ್ಟೆಗೆ ತೆರಳುತಿದ್ದ ಎನ್ನಲಾಗಿದೆ. ಆಗ ಆತನ ಬೈಕ್ ಅಡ್ಡಗಟ್ಟಿದ ಹಂತಕರು ಹಲ್ಲೆ ಮಾಡಿದ್ದಾರೆ. ಅವರಿಂದ ತಪ್ಪಿಸಿಕೊಳ್ಳಲು ಬ್ಯಾಂಕ್ ನೊಳಗೆ ನುಗ್ಗಿದನಾದರೂ ಹಂತಕರು ಒಳಗೆ ನುಗ್ಗಿ ಕೊಚ್ಚಿ ಕೊಲೆ ಮಾಡಿದ್ದಾರೆ.
ಆಡುಗೋಡಿ ಠಾಣೆಯ ರೌಡಿಶೀಟರ್ನಲ್ಲಿ ಬಬ್ಲಿಯ ಹೆಸರು ಇತ್ತು. ಸ್ಥಳೀಯ ರಾಜೇಂದ್ರ ಕೊಳಚೆ ಪ್ರದೇಶದ ನಿವಾಸಿಯಾಗಿರುವ ಬಬ್ಲಿ ಅಕ್ರಮವಾಗಿ ಮತಾಂತರದಲ್ಲಿ ತೊಡಗಿದ್ದ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬ್ಯಾಂಕ್ಗೆ ಧಾವಿಸಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಹಾಗೂ ಆಗ್ನೇಯ ಡಿಸಿಪಿ ಜೋಶಿ ಶ್ರೀನಾಥ್ ಮಹದೇವ್ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆಯಾದ ವ್ಯಕ್ತಿ ಬಬ್ಲಿ ಕೋರಮಂಗಲದ ರಾಜೇಂದ್ರ ಮತ್ತು ವಿವೇಕ ನಗರದ ಜಾರ್ಜ್ ಎಂಬಾತನ ಜೊತೆ ದ್ವೇಷ ಹೊಂದಿದ್ದ ಎನ್ನಲಾಗಿದೆ. ಬಬ್ಲಿ, 2011 ರವರೆಗೂ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬಳಿಕ ಯಾವುದೇ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರಲಿಲ್ಲ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತರು ಹೇಳಿದ್ದಾರೆ.
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.
ಲೋಕಸಭಾ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಬಿಜೆಪಿ ಈ ಸಲ ಒಂದಂಕಿ ಸಂಖ್ಯೆ ದಾಟುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರನ್ನು 4 ದಿನ ಎಸ್ಐಟಿ ವಶಕ್ಕೆ…
ನಾಯಿಗಳಿಗೆ ಊಟ ಹಾಕುತ್ತಿದ್ದ ಸಂದರ್ಭದಲ್ಲಿ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ದೂರು ನೀಡಿದ್ದು, ಅಶೋಕನಗರ ಠಾಣೆಯಲ್ಲಿ ಪ್ರಕರಣ…
ಕಾಶ್ಮೀರದ ಪೂಂಚ್ನಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಗಿಳಿದ ಸೇನೆ ಹಲವರನ್ನು…