ಕಾರವಾರ: ಎನ್ಐಎ (ರಾಷ್ಟ್ರೀಯ ತನಿಖಾ ದಳ) ದ ಅಧಿಕಾರಿಗಳು ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ದಾಳಿ ನಡೆಸಿದ್ದಾರೆ. ಹಳೆಯ ಪ್ರಕರಣವೊಂದಕ್ಕೆ ಸಂಬಂದಿಸಿದಂತೆ ಈ ಧಾಳಿ ನಡೆದಿದೆ ಎಂದು ಹೇಳಲಾಗಿದ್ದು ಭಟ್ಕಳದ ಉಮರ್ ಸ್ಟ್ರೀಟ್, ತೆಂಗಿನ ಗುಂಡಿ ಹಾಗೂ ಸಾಗರ ರಸ್ತೆಯಲ್ಲಿರುವ ಮನೆಗಳಿಗೆ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದೆ.
ಭಟ್ಕಳದ ಅಮೀನ್ ಜುವೇಬ್ ಹಾಗೂ ಜವಾದ್ ಇಬ್ಬರನ್ನು ತೀವ್ರ ತನಿಖೆ ನಡೆಸುತ್ತಿದ್ದು, ಈ ಹಿಂದೆ ದುಬೈ ನಲ್ಲಿ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಓರ್ವನ ತಮ್ಮನನ್ನೂ ಎನ್ಐಎ ವಶಕ್ಕೆ ಪಡೆದಿದೆ.
ಸ್ಥಳದಲ್ಲಿ ಕೆಎಸ್ಆರ್ ಪಿ ತುಕಡಿ ಜಮಾವಣೆ ಮಾಡಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಮೊಕ್ಕಾಂ ಹೂಡಿದ್ದಾರೆ. ವಶಕ್ಕೆ ಪಡೆದವರಿಗೆ ಐಸಿಸ್ ನಂಟಿರುವ ಕುರಿತು ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ. ಬುಧವಾರವಷ್ಟೆ ಅಧಿಕಾರಿಗಳು ಮಂಗಳೂರಿನಲ್ಲಿ ಧಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದರು.
ಭಟ್ಕಳದಲ್ಲಿ ಎನ್ಐಏ ಅಧಿಕಾರಿಗಳ ಧಾಳಿ : ಮೂವರು ಶಂಕಿತರ ಬಂಧನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.