News Karnataka Kannada
Tuesday, April 30 2024
ತುಮಕೂರು

ಭಾನುವಾರವೂ ಕೋವಿಡ್ – 19 ಲಸಿಕೆ ನೀಡಬೇಕು ಎಂಬುದರ ಬಗ್ಗೆ ಚಿಂತನೆ ನಡೆಯುತ್ತಿದೆ-ಬಸವರಾಜ ಬೊಮ್ಮಾಯಿ

Basavaraj Bommaih V Ponnuraj 01082021
Photo Credit :

ತುಮಕೂರು: ಭಾನುವಾರವೂ ಕೋವಿಡ್ – 19 ಲಸಿಕೆ ನೀಡಬೇಕು ಎಂಬುದರ ಬಗ್ಗೆ ಚಿಂತನೆ ನಡೆಯುತ್ತಿದೆ. ಕೆಲವು ವಲಯಗಳಿಂದ‌ ನಮಗೂ ಬೇಡಿಕೆ‌ ಬಂದಿದೆ. ಅದನ್ನು ಗಮನಿಸಿ, ಈ ಸಂಬಂಧ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ದಿನ ಜನರು ಜಾಸ್ತಿ ಫ್ರೀಯಾಗಿ ಇರುತ್ತಾರೆ. ಅವತ್ತು ಕೊರೊನಾ ಲಸಿಕೆ ಪಡೆದುಕೊಳ್ಳಲು ಅನುಕೂಲ ಆಗುತ್ತದೆ ಅಂತ. ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಅದರ ಬಗ್ಗೆ ಆದಷ್ಟು ಬೇಗ ತೀರ್ಮಾನ ಮಾಡುತ್ತಾರೆ. ಅದೇ ದಿಕ್ಕಿನಲ್ಲಿ ನಮ್ಮ ಚಿಂತನೆ ಕೂಡ ಇದೆ ಎಂದು ಹೇಳಿದರು.

ಚಾಣಾಕ್ಯ ವಿಶ್ವವಿದ್ಯಾಲಯಕ್ಕೆ ಜಮೀನು ಮಂಜೂರಿಗೆ ಕಾಂಗ್ರೆಸ್‌ ವಿರೋಧ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನವರು ಬೇರೆ ಬೇರೆ ಉದ್ದೇಶಕ್ಕೆ ಎಷ್ಟು ಭೂಮಿ ನೀಡಿದ್ದಾರೆ ಎನ್ನುವ ಪಟ್ಟಿ ನಮ್ಮ ಬಳಿ ಇದೆ. ಒಂದೊಳ್ಳೆ ಉದ್ದೇಶಕ್ಕೆ, ಶಿಕ್ಷಣಕ್ಕಾಗಿ ನಾವು ಜಮೀನು ಕೊಡುತ್ತಿದ್ದೇವೆ ಎಂದು ಸಮರ್ಥನೆ ಮಾಡಿಕೊಂಡರು.
ರಾಜ್ಯದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳಿಗೆ ಹಿಂದಿನಿಂದಲೂ ಜಾಗ ಕೊಡುತ್ತಾ ಬರಲಾಗಿದೆ. ಅದೇ ರೀತಿ ಈಗಲೂ ಕೊಟ್ಟಿದ್ದೇವೆ. ಅದರಲ್ಲಿ ವಿಶೇಷವೇನಿಲ್ಲಾ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ತುಮಕೂರು‌‌ ಜಿಲ್ಲೆಗೆ ಮೆಡಿಕಲ್ ಕಾಲೇಜು ಬೇಕು ಎಂಬ ಬೇಡಿಕೆ‌ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೆಡಿಕಲ್ ಕಾಲೇಜಿನ ಬಗ್ಗೆ ವೇದಿಕೆ ಮೇಲೆ ತೀರ್ಮಾನ ಮಾಡೋದಕ್ಕೆ ಆಗೋದಿಲ್ಲ ಎಂದು ಹೇಳಿದರು.

ಈ ಮುಂಚೆಯೂ ಸಚಿವ ಜೆ.ಸಿ ಮಾಧುಸ್ವಾಮಿ ಅದರ ಬಗ್ಗೆ ಬೇಡಿಕೆ‌ ಇಟ್ಟಿದ್ದಾರೆ. ಜಿಲ್ಲಾ ಕೇಂದ್ರ ಬಿಟ್ಟು ಬೇರೆ ಕಡೆ ಕೊಡೋ ವ್ಯವಸ್ಥೆ ಬಂದರೆ ತುಮಕೂರಿಗೆ ಮೊದಲ ಪ್ರಾಶಸ್ತ್ಯ ನೀಡುತ್ತೇವೆ ಎಂದು ಭರವಸೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು