ಬೆಂಗಳೂರು: ಶಾಸಕರ ಭವನದಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೊಠಡಿಯ ಬಾಗಿಲಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಿನ್ ಲಾಡೆನ್ ಮುಖ ಹೋಲುವ ಭಿತ್ತಿಪತ್ರ ಅಂಟಿಸುವ ಮೂಲಕ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ವಿರುದ್ಧ ಬಸನಗೌಡ ಪಾಟೀಲ್ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಬೆಂಗಳೂರು ನಗರ ಕಾಂಗ್ರೆಸ್ ಕಾರ್ಯಕರ್ತರು, ಶಾಸಕರ ಭವನದಲ್ಲಿರುವ ಯತ್ನಾಳ್ ಕೊಠಡಿಗೆ ಸೋಮವಾರ ಬಿನ್ ಲಾಡೆನ್ ಮುಖ ಹೋಲುವ ಯತ್ನಾಳ್ ಭಾವಚಿತ್ರವಿರುವ ಭಿತ್ತಿಪತ್ರ ಅಂಟಿಸಿ ಯತ್ನಾಳರ ತಂದೆ ಬಿನ್ ಲಾಡೆನ್ನೋ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.
ಭಿತ್ತಿಪತ್ರ ಅಂಟಿಸಿ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಬಂಧನ!
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.