News Karnataka Kannada
Sunday, April 28 2024
ಕರ್ನಾಟಕ

ಭೂ ಮಾಫಿಯಾ ಸಖ್ಯ ಹೊಂದಿದರೆ ಕಠಿಣ ಕ್ರಮ ; ಪೋಲೀಸರಿಗೆ ಬೊಮ್ಮಾಯಿ ಎಚ್ಚರಿಕೆ

Police Meeting
Photo Credit :

ಬೆಂಗಳೂರು,   ಭೂ ಮಾಫಿಯಾ ಜತೆ ಸಖ್ಯ ಬೆಳೆಸುವ ಪೊಲೀಸ್ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿಂದು ನಡೆದ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಪೊಲೀಸ್ ಠಾಣೆಗಳು ಮತ್ತು ಪೊಲೀಸ್ ಅಧಿಕಾರಿಗಳು ಭೂಮಾಫಿಯಾದವರ ಜತೆ ಕೈಜೋಡಿಸಿರುವುದು, ಕೆಲ ಪೊಲೀಸ್ ಠಾಣೆಗಳು ಭೂ ವ್ಯವಹಾರಗಳ ಕೇಂದ್ರವಾಗಿರುವುದು ತಮ್ಮ ಗಮನಕ್ಕೂ ಬಂದಿದೆ. ಅಂತಹ ಅಧಿಕಾರಿಗಳನ್ನು ಗುರುತಿಸಿ ಈಗಾಗಲೇ ಅಮಾನತು ಮಾಡಿದ್ದೇವೆ. ಮುಂದೆಯೂ ಸಹ ಭೂಮಾಫಿಯ ಜತೆ ಸಖ್ಯ ಬೆಳೆಸುವ ಅಧಿಕಾರಿಗಳ ವಿರುದ್ಧ ಉಗ್ರ ಕ್ರಮ ಕೈಗೊಳ್ಳಲಾಗುವುದು ಎಂದರು.
ಲ್ಯಾಂಡ್ ಮಾಫಿಯಾ ಜತೆ ಯಾವುದೇ ರೀತಿಯ ಬಾಂಧವ್ಯ ಇಟ್ಟುಕೊಂಡರೆ ಅಂತಹವರ ವಿರುದ್ಧ ಕ್ರಮ ನಿಶ್ಚಿತ ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಶಾಂತಿ, ಸುವ್ಯವಸ್ಥೆಗೆ ಹೆಸರಾಗಿರುವ ರಾಜ್ಯ. ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಸರ್ಕಾರದ ಪ್ರಥಮ ಆದ್ಯತೆ. ಆ ನಿಟ್ಟಿನಲ್ಲಿ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು