News Karnataka Kannada
Sunday, May 19 2024
ಕರ್ನಾಟಕ

ಮಂಜೇಶ್ವರ ವಿಧಾನಸಭೆ ಉಪಚುನಾವಣೆ: ಕುಂಟಾರು ರವೀಶ್ ತಂತ್ರಿ ಬಿಜೆಪಿ ಅಭ್ಯರ್ಥಿ

Photo Credit :

ಮಂಜೇಶ್ವರ ವಿಧಾನಸಭೆ ಉಪಚುನಾವಣೆ: ಕುಂಟಾರು ರವೀಶ್ ತಂತ್ರಿ ಬಿಜೆಪಿ ಅಭ್ಯರ್ಥಿ

ಕಾಸರಗೋಡು: ಅಕ್ಟೋಬರ್ 21ರಂದು ಉಪಚುನಾವಣೆ ನಡೆಯಲಿರುವ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆಗೆ ಮತ್ತೆ ಸಾಕ್ಷಿಯಾಗುತ್ತಿದೆ. ಹಲವು ಗೊಂದಲದ ಬಳಿಕ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಸಲು ನಾಳೆ ಕೊನೆ ದಿನವಾಗಿದೆ.

ಬಿಜೆಪಿಯಿಂದ  ರವೀಶ ತಂತ್ರಿ ಕುಂಟಾರು ಅವರನ್ನು ಮತ್ತೆ ಕಣಕ್ಕಿಳಿಸಲಾಗಿದೆ.  ಯು ಡಿ ಎಫ್ ನಿಂದ ಎಂ . ಸಿ ಖಮರುದ್ದೀನ್,  ಎಲ್ ಡಿ ಎಫ್ ನಿಂದ ಎಂ . ಶಂಕರ ರೈ ಅಭ್ಯರ್ಥಿಯಾಗಿದ್ದಾರೆ.

ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಮಂಜೇಶ್ವರದಿಂದ ಈ ಬಾರೀ ಎಲ್ ಡಿ ಎಫ್ ಮತ್ತು ಬಿಜೆಪಿ ಕನ್ನಡಿಗ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ಬಿಜೆಪಿಯಿಂದ ಜಿಲ್ಲಾ ಪಂಚಾಯತ್ ಸದಸ್ಯ ಕೆ .ಶ್ರೀಕಾಂತ್ , ಕೆ .ಸತೀಶ್ಚಂದ್ರ ಭಂಡಾರಿ ಅವರ ಹೆಸರು ಕೊನೆತನಕ ಕೇಳಿ ಬಂದಿದ್ದರೂ ರವೀಶ ತಂತ್ರಿ ಅವರಿಗೆ ಟಿಕೆಟ್ ನೀಡಲಾಗಿದೆ.

2016 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ .ಸುರೇಂದ್ರನ್ ಕೇವಲ 89 ಮತಗಳ ಅಂತರದಿಂದ ಸೋಲು ಕಂಡಿದ್ದರು.

ರವೀಶ ತಂತ್ರಿ ಅವರು 2016 ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಸರಗೋಡು  ವಿಧಾನಸಭಾ ಕ್ಷೇತ್ರದಿಂದ  ಸ್ಪರ್ಧಿಸಿ ಸುಮಾರು ಎಂಟು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲು ಕಂಡಿದ್ದರು. ಕಳೆದ ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಸರಗೋಡು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದ  ರವೀಶ ತಂತ್ರಿ ಮೂರನೇ  ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. 2016 ರಲ್ಲಿ ಕಣಕ್ಕಿಳಿದಿದ್ದ ಕೆ . ಸುರೇಂದ್ರನ್ ಈ ಬಾರೀ  ಸ್ಪರ್ಧಿಸಲು ನಿರಾಕರಿಸಿದ್ದು, ಇದರಿಂದ ಎರಡನೇ ಅಭ್ಯರ್ಥಿ ಆಯ್ಕೆ ಬಿಜೆಪಿಗೆ ಸವಾಲಾಗಿ ಪರಿಣಮಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು