ಮಂಡ್ಯ: ಜಿಲ್ಲೆಯ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರನ್ನು ನಿನ್ನೆ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ದೇವಾಲಯದ ಅವರಣದಲ್ಲೇ ಕೊಲೆ ನಡೆದಿದ್ದು, ಕೊಲೆಯಾದ ಮೂವರನ್ನು . ಪ್ರಕಾಶ (34) ಆನಂದ (33) ಹಾಗೂ ಗಣಪತಿ (35) ಎಂದು ಗುರುತಿಸಲಾಗಿದೆ.
ಮೂವರು ದೇವಸ್ಥಾನದಲ್ಲಿ ಅರ್ಚಕರಾಗಿಯೂ ಮತ್ತು ರಾತ್ರಿ ಕಾವಲುಗಾರರಾಗಿಯೂ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಮಲಗಿದ್ದ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೊತೆಗೆ ಮೂರು ಹುಂಡಿಗಳನ್ನು ಹೊತ್ತೊಯ್ದು ದೇವಾಲಯದ ಹೊರಗೆ ಬಿಸಾಡಿದ್ದಾರೆ. ಹೀಗಾಗಿ ದುಷ್ಕರ್ಮಿಗಳು ಹುಂಡಿ ಹಣಕ್ಕಾಗಿ ಮೂವರನ್ನು ಹತ್ಯೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸ್ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಶ್ವಾನ ದಳ ಕರೆದೊಯ್ಯಲಾಗಿದೆ.