ಪುತ್ತೂರು: ಪೋಷಕರು ಮಾಡಿದ ಎಡವಟ್ಟಿನಿಂದ ಸುಮಾರು 2 ವರ್ಷದ ಮಗು, ಸುಮಾರು 20 ನಿಮಿಷ ಕಾಲ ಕಾರಿನಲ್ಲೇ ಬಂಧಿಯಾದ ಘಟನೆ ಪುತ್ತೂರಿನ ಸಂಜೀವ ಶೆಟ್ಟಿ ಅಂಗಡಿ ಎದುರು ನಡೆದ ಬಗ್ಗೆ ವರದಿಯಾಗಿದೆ.
ಮುಂಬಾಯಿಯಲ್ಲಿ ವಾಸ್ತವ್ಯ ಇರುವ ಕನ್ಯಾನ ಮೂಲದ ಶಶಿ ಕೆ ಶೆಟ್ಟಿ ಎಂಬವರು ಮನೆ ಮಂದಿಯೊಂದಿಗೆ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಬಳಿಯ ಸಂಜೀವ ಶೆಟ್ಟಿ ಜವುಳಿ ಮಳಿಗೆಗೆ ಬಟ್ಟೆ ಖರೀದಿಗಾಗಿ ಮಾರುತಿ ಸ್ವಿಪ್ಟ್ ಡಿಸೈರ್ ಕಾರಿನಲ್ಲಿ ಬಂದಿದ್ದರು. ಅವರು ಕಾರನ್ನು ಮಳಿಗೆಯ ಎದುರು ಪಾರ್ಕ್ ಮಾಡಿ ಕಾರಿನಿಂದ ಹೊರಗೆ ಇಳಿಯುತ್ತಲೇ ಕಾರಿನಲ್ಲಿದ್ದ ಅವರ ಮಗು ಹಠ ಮಾಡುತ್ತಿದೆ ಎಂದು ಕಾರಿನ ಕೀ ಕೊಟ್ಟು ಹಿಂದಕ್ಕೆ ನೋಡುತ್ತಿದ್ದಂತೆ ಕಾರಿನ ಡೋರ್ ಆಟೋ ಲಾಕ್ ಆಗಿತ್ತು.
ಇದೇ ಸಂದರ್ಭದಲ್ಲಿ ಮಗು ಕೂಡಾ ಕಾರಿನ ಕೀಯನ್ನು ಹಿಡಿದು ಕೊಂಡು ಆಟ ಆಡುತ್ತಿತ್ತು ಹೊರತು ಕಾರಿನ ಲಾಕ್ ಓಪನ್ ಮಾಡಲು ಮಗುವಿಗೆ ತಿಳಿದಿರಲಿಲ್ಲ. ವಿಷಯ ತಿಳಿದು ಜನರ ಗುಂಪು ಕಾರಿನ ಸುತ್ತು ಆವರಿಸಿದಾಗ ಮಗು ಅಳತೊಡಗಿತ್ತು. ಇದರಿಂದ ಗಾಭರಿಯಾದ ಪೋಷಕರು ಕಾರಿನ ಲಾಕ್ ತೆಗೆಯಲು ಪೇಚಾಡುತ್ತಿದ್ದರು. ಬಳಿಕ ಕೆಲವರು ಸ್ಥಳೀಯರು ಬಂದು ಕಾರಿನ ಗಾಜನ್ನು ಒಡೆದು ಮಗುವನ್ನು ರಕ್ಷಣೆ ಮಾಡಿದರು.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…