ಮಡಿಕೇರಿ: ಹೊಂಡ ಗುಂಡಿಗಳಿಂದ ಕೂಡಿರುವ ಮಡಿಕೇರಿ ನಗರದ ರಸ್ತೆಗಳನ್ನು ತಕ್ಷಣ ದುರಸ್ತಿ ಪಡಿಸಬೇಕೆಂದು ಒತ್ತಾಯಿಸಿ ಜಾತ್ಯಾತೀತ ಜನತಾದಳದ ನಗರ ಘಟಕ ಪ್ರತಿಭಟನೆ ನಡೆಸಿತು.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ತೆರಳುವ ರೆಸ್ಕೋರ್ಸ್ ರಸ್ತೆಯ ಗುಂಡಿಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಬಾಳೆಗಿಡ ನೆಟ್ಟು ನಗರಸಭೆಯನ್ನು ನರಕಸಭೆ ಎಂದು ಘೋಷಣೆ ಕೂಗುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ ನಗರದ ಮುಖ್ಯ ರಸ್ತೆಗಳು ಹೊಂಡ ಗುಂಡಿಗಳಿಂದ ಕೂಡಿದ್ದು, ಕೆರೆಗಳಂತಾಗಿವೆ. ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸಂಚರಿಸಲು ಸಾಧ್ಯವೇ ಇಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಲಾಕ್ಡೌನ್ ಸಂದರ್ಭ ರಸ್ತೆ ಕಾಮಗಾರಿ ನಡೆಸಲು ಸಾಕಷ್ಟು ಕಾಲಾವಕಾಶವಿತ್ತು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಕಾರ್ಮಿಕರಿಗೆ ಬೇಕಾದ ಸೌಲಭ್ಯವನ್ನು ಕಲ್ಪಿಸಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬಹುದಿತ್ತು. ಆದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಗರದ ರಸ್ತೆಗಳ ಬಗ್ಗೆ ಕಾಳಜಿಯೇ ವಹಿಸುತ್ತಿಲ್ಲವೆಂದು ಆರೋಪಿಸಿದರು.
ನಗರಸಭೆ ಅಧಿಕಾರಿಗಳು ಇನ್ನಾದರೂ ತಮ್ಮ ಜವಾಬ್ದಾರಿಯನ್ನು ಅರಿತು ನಗರದ ರಸ್ತೆಗಳನ್ನು ದುರಸ್ತಿ ಪಡಿಸದಿದ್ದಲ್ಲಿ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಇಬ್ರಾಹಿಂ ಎಚ್ಚರಿಕೆ ನೀಡಿದರು.
ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕಲೀಲ್ ಭಾಷಾ ಮಾತನಾಡಿ, ಕರ್ನಾಟಕದ ಕಾಶ್ಮೀರವೆಂದೇ ಪ್ರಖ್ಯಾತವಾಗಿರುವ ಈ ಸುಂದರ ಕೊಡಗಿನ ಪ್ರಮುಖ ರಸ್ತೆಗಳೇ ಹದಗೆಟ್ಟಿದ್ದು, ಪ್ರವಾಸಿಗರೆದುರು ತಲೆ ತಗ್ಗಿಸುವಂತ್ತಾಗಿದೆ ಎಂದರು. ನಗರದ ಕೇಂದ್ರ ಬಿಂದುವಾಗಿದ್ದ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿ 2018ರಲ್ಲಿ ಬರೆ ಕುಸಿದು ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ ವರ್ಷಗಳೇ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ನಗರದ ಮೀನು ಮಾರುಕಟ್ಟೆಯಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿರದೆ, ಸಾರ್ವಜನಿಕರು ಪರದಾಡುವಂತಾಗಿದೆ. ಇಂಟರ್ ಲಾಕ್ ಹಾಕುವ ಮೂಲಕ ಮಾರುಕಟ್ಟೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿದ ಅವರು ಪ್ರತಿ ವಾರ್ಡ್ನ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…
ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…