News Karnataka Kannada
Saturday, May 11 2024
ಕರ್ನಾಟಕ

ಮತಪತ್ರ ಜಾರಿಗೆ ಮಹಿಳಾ ಕಾಂಗ್ರೆಸ್ ಪತ್ರ ಚಳವಳಿ

Photo Credit :

ಮತಪತ್ರ ಜಾರಿಗೆ ಮಹಿಳಾ ಕಾಂಗ್ರೆಸ್ ಪತ್ರ ಚಳವಳಿ

ಮಂಡ್ಯ: ಚುನಾವಣೆಗಳಲ್ಲಿ ಇವಿಎಂ ಮತ ಯಂತ್ರಗಳ ಬದಲಿಗೆ ಮತಪತ್ರ ಜಾರಿಗೊಳಿಸುವಂತೆ ಒತ್ತಾಯಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪತ್ರ ಚಳವಳಿ ನಡೆಸಿದರು.

ಇಲ್ಲಿನ ಪ್ರಧಾನ ಅಂಚೆ ಕಚೇರಿ ಬಳಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇವಿಎಂಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ನೂರಾರುಪತ್ರಗಳನ್ನು ಬರೆದು ರಾಷ್ಟ್ರಪತಿಗಳಿಗೆ ಪೋಸ್ಟ್ ಮಾಡಿದರು.

ಅಭಿವೃದ್ಧಿ ಹೊಂದಿದ ರಾಷ್ಟ್ರಗಳಾದ ಅಮೆರಿಕಾ, ಜರ್ಮನಿ, ಜಪಾನ್ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಇಂದಿಗೂ ಚುನಾವಣೆಗಳಿಗೆ ಮತಪತ್ರಗಳನ್ನೇ ಬಳಕೆ ಮಾಡುತ್ತಿದ್ದಾರೆ. ಇವಿಎಂ ಮತಯಂತ್ರಗಳ ಬಗ್ಗೆ ಸಾಕಷ್ಟು ಅನುಮಾನ, ಅಪಸ್ವರಗಳು ಕೇಳಿಬರುತ್ತಿವೆ. ರಾಷ್ಟ್ರದ ಬಹುತೇಕ ರಾಜಕೀಯ ಪಕ್ಷಗಳು ಚುನಾವಣೆಗಳಲ್ಲಿ ಇವಿಎಂ ಬಳಕೆಯನ್ನು ವಿರೋಧಿಸಿವೆ. ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸುವಂತೆ ಆಗ್ರಹಿಸುತ್ತಿರುವುದರಿಂದ ರಾಷ್ಟ್ರಪತಿಗಳು ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ ಮಾಡಿದರು.

ಇವಿಎಂ ಬಳಕೆ ಕುರಿತಂತೆ ಕೇಂದ್ರ ಸರ್ಕಾರ ಹಠಮಾರಿ ಧೋರಣೆಯನ್ನು ಮುಂದುವರಿಸಿದೆ. ಮಾನವ ನಿರ್ಮಿತ ತಾಂತ್ರಿಕತೆ ಎಷ್ಟೇ ಮುಂದುವರೆದಿದ್ದರೂ ಅದರಿಂದ ಎಷ್ಟು ಅನುಕೂಲವೋ ಅಷ್ಟೇ ದುರುಪಯೋಗವಾಗುವ ಸಾಧ್ಯತೆಗಳಿವೆ. ರಾಷ್ಟ್ರದ ರಾಜಕೀಯ ಪಕ್ಷಗಳ ನಾಯಕರಲ್ಲಿ ಹಾಗೂ ದೇಶದ ನಾಗರೀಕರಲ್ಲಿ ಅನುಮಾನಕ್ಕೆ ಅವಕಾಶ ನೀಡಿರುವ ಇವಿಎಂ ರದ್ಧುಪಡಿಸಬೇಕೆಂದು ಪ್ರತಿಭಟನಾಕಾರರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು