ಮುಂಬೈ: ಮಹಾರಾಷ್ಟ್ರದ ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಇಂದು ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ.
ಮಹಾರಾಷ್ಟ್ರದ ರಾಜಕೀಯದಲ್ಲಿ ಇಂದು ನಡೆದ ಕ್ಷಿಪ್ರ ಬೆಳವಣಿಗೆಯಿಂದ ಎರಡನೇ ಬಾರಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರು ಮುಖ್ಯಮಂತ್ರಿಯಾಗಿ ಹಾಗೂ ಎನ್ ಸಿಪಿಯ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಪ್ರಮಾಣ ವಚನ ಭೋಧಿಸಿದರು. ಈ ಮೂಲಕ ಮಹಾರಾಷ್ಟ್ರದಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಗೆ ಅಂತ್ಯಹಾಡಲಾಯಿತು.