News Karnataka Kannada
Sunday, April 28 2024
ಕರ್ನಾಟಕ

ಮಲೆಮಹದೇಶ್ವರ ಬೆಟ್ಟದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿ ಉದ್ಘಾಟಿಸಿದ ಸಿಎಂ

Photo Credit :

ಮಲೆಮಹದೇಶ್ವರ ಬೆಟ್ಟದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿ ಉದ್ಘಾಟಿಸಿದ ಸಿಎಂ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿರುವ ಪವಾಡ ಪುರುಷ ಮಲೆ ಮಹದೇಶ್ವರರು ನೆಲೆಸಿರುವ ಜಿಲ್ಲೆಯ ಮಹದೇಶ್ವರಬೆಟ್ಟದಲ್ಲಿ ಸುಮಾರು 123.77ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು,  ಶ್ರೀ ಮಲೆಮಹದೇಶ್ವರ ಬೆಟ್ಟದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು ಭಕ್ತಾಧಿಗಳ ಅನುಕೂಲಕ್ಕಾಗಿ 109 ಕೋಟಿ ವೆಚ್ಚದಲ್ಲಿ ಅತಿಥಿ ಗೃಹ ನಿರ್ಮಾಣ, ಡಾರ್ಮೆಟರಿ ನಿರ್ಮಾಣ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಶ್ರೀ ಮಹದೇಶ್ವರ ಬೆಟ್ಟದ ಈ ಪುಣ್ಯ ಕ್ಷೇತ್ರದಲ್ಲಿ ಚಾಲನೆ ನೀಡಿದ ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸುವಂತೆ ಸೂಚಿಸಿದರಲ್ಲದೆ, ದೇವಸ್ಥಾನದಲ್ಲಿ ನೈರ್ಮಲ್ಯಕ್ಕೆ ಮತ್ತು ಪ್ರಾಧಿಕಾರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು 720 ಜನರು ತಂಗುವ ಡಾರ್ಮೇಟರಿ ಕಟ್ಟಡ, ಅಂತರಗಂಗೆ ಸಮೀಪ ಶುದ್ಧ ನೀರಿನ ಕಲ್ಯಾಣಿಯ ಉದ್ಘಾಟನೆ, ವಾಣಿಜ್ಯ ಸಂಕೀರ್ಣ ಕಟ್ಟಡದ ಪಕ್ಕದಲ್ಲಿ ಆಧುನಿಕ ಸುಸಜ್ಜಿತ ಉಪಹಾರ ಮಂದಿರದ ಉದ್ಘಾಟನೆ, ಹಾಲಿ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಮಾಹಿತಿ ಕೇಂದ್ರ ಕಟ್ಟಡದ ಉದ್ಘಾಟನೆ, ರಾಜಗೋಪುರದ ಮುಂಭಾಗದಲ್ಲಿರುವ ಕಾಬಲ್ ನೆಲಹಾಸು ಆವರಣದ ಕೆಳಭಾಗದಲ್ಲಿ 65 ಶೌಚಾಲಯಗಳ ಕಟ್ಟಡ ಉದ್ಘಾಟನೆ, ಆಡಳಿತ ಕಚೇರಿಯ ಮುಂಭಾಗದ ಪಾರ್ಕಿಂಗ್ ಯಾರ್ಡ್ ಹತ್ತಿರ ಶೌಚಾಲಯ ಕಟ್ಟಡ ಉದ್ಘಾಟನೆ, ದೇವಸ್ಥಾನದ ಒಳ ಪ್ರಾಂಗಣದಲ್ಲಿರುವ ಕೊಠಡಿಯನ್ನು ನವೀಕರಿಸುವ ಕಾಮಗಾರಿ, ನಾಗಮಲೆ ಭವನದಲ್ಲಿರುವ ಕೊಠಡಿಯನ್ನು ವೀಡಿಯೋ ಕಾನ್ಪರೇನ್ಸ್ ಹಾಲ್ ಆಗಿ ಮಾರ್ಪಡಿಸುವ ಕಾಮಗಾರಿಗಳನ್ನು ಉದ್ಘಾಟಿಸಿದರು.

ಇನ್ನು ಮಾಸ್ಟರ್ ಪ್ಲಾನ್ ಆವರಣದಲ್ಲಿ 512 ಕೊಠಡಿಗಳ (ಎರಡನೇ ಹಂತದಲ್ಲಿ 416 ಕೊಠಡಿಗಳು) ಅತಿಥಿ ಗೃಹ ನಿರ್ಮಾಣ ಕಾಮಗಾರಿ, ದೇವಸ್ಥಾನದ ಹಿಂಭಾಗದಲ್ಲಿ ಸರತಿ ಸಾಲಿನ ಸಂಕೀರ್ಣ ನಿರ್ಮಾಣ ಕಾಮಗಾರಿ, ತಾಳಬೆಟ್ಟದಿಂದ ಮಲೆಮಹದೇಶ್ವರ ಸ್ವಾಮಿ ದೇವಾಸ್ಥಾನದವರೆಗೆ ಕಾಲ್ನಡಿಗೆ ಮಾರ್ಗದಲ್ಲಿ ಗ್ರಾನೈಟ್ ಮೆಟ್ಟಿಲು ನಿರ್ಮಾಣ ಹಾಗೂ ಇತರೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕಾಮಗಾರಿ, ಮಾಸ್ಟರ್ ಪ್ಲಾನ್ ಆವರಣದಲ್ಲಿ 30ಜನರು ತಂಗುವ ಟಾರ್ಮೆಂಟರಿ ಕಟ್ಟಡ ಕಾಮಗಾರಿ(ಎರಡನೇ ಹಂತ), ಮಾಸ್ಟರ್ ಪ್ಲಾನ್ ಆವರಣದಲ್ಲಿ ದೊಡ್ಡಕೆರೆ ಅಭಿವೃದ್ಧಿ ಕಾಮಗಾರಿ, ಪ್ರಾಧಿಕಾರದ ದಾಸೋಹ ಭವನದಿಂದ ಶಾಶ್ವತ ಹೆಲಿಪ್ಯಾಡ್ ವರೆಗೆ ರಸ್ತೆಯನ್ನು ಅಭಿವೃದ್ಧಿಪಡಿಸುವುದು, ಮಹದೇಶ್ವರ ಬೆಟ್ಟದ ಕತ್ತಿ ಪವಾಡದಿಂದ ತಂಬಡಿಗೆರೆ ಮುಖಾಂತರ ಎಸ್ಬಿಎಂ ವೃತ್ತದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ, ಮಾಸ್ಟರ್ ಪ್ಲಾನ್ ಆವರಣದಲ್ಲಿ ಪೆÇಲೀಸ್ ವಸತಿ ಗೃಹಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ, ಮಾಸ್ಟರ್ ಪ್ಲಾನ್ ಆವರಣದಲ್ಲಿ ಹೆಚ್ಚುವರಿ ಲಾಡು ತಯಾರಿಸುವ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು