News Karnataka Kannada
Thursday, May 09 2024
ಕರ್ನಾಟಕ

ಮಲೆಮಹದೇಶ್ವರ ಬೆಟ್ಟದಲ್ಲಿ ಕಾಣಿಕೆ ಹಣ ಎಣಿಕೆ

Photo Credit :

ಮಲೆಮಹದೇಶ್ವರ ಬೆಟ್ಟದಲ್ಲಿ ಕಾಣಿಕೆ ಹಣ ಎಣಿಕೆ

ಚಾಮರಾಜನಗರ: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆಯನ್ನು ಶನಿವಾರ ನಡೆಸಲಾಗಿದ್ದು, 1,71,14,219 ರೂಪಾಯಿ ಕಾಣಿಕೆ ಸಂಗ್ರಹವಾಗಿದ್ದು, ಆ ಮೂಲಕ ಮಹದೇಶ್ವರ ಕೋಟ್ಯಧಿಪತಿಯಾಗಿಯೇ ಮುಂದುವರೆಯುವುದರೊಂದಿಗೆ ರಾಜ್ಯದ ಎರಡನೇ ಅತಿ ಹೆಚ್ಚು ಆದಾಯ ತರುವ ಕ್ಷೇತ್ರವೆಂಬ ಖ್ಯಾತಿಯನ್ನು ಉಳಿಸಿಕೊಂಡಿದೆ.

ಇದೀಗ ಸಂಗ್ರಹವಾಗಿರುವ ಕಾಣಿಕೆ ಹಣವು ಶ್ರೀಕ್ಷೇತ್ರದಲ್ಲಿ ನಡೆಯುವ ದೀಪಾವಳಿ ಜಾತ್ರೆಗಳ ಇತಿಹಾಸದಲ್ಲಿಯೇ ಅತಿ ಹೆಚ್ಚು ಸಂಗ್ರಹವಾಗಿರುವ ಕಾಣಿಕೆಯಾಗಿದೆ. ಹಿಂದೆ ಶಿವರಾತ್ರಿ ಜಾತ್ರೆಯಲ್ಲಿ 2 ಕೋಟಿ ರೂ., ಯುಗಾದಿ ಜಾತ್ರೆಯಲ್ಲಿ 1.95 ಕೋಟಿ ರೂ. ಕಾಣಿಕೆ ಸಂಗ್ರಹವಾಗಿತ್ತು. ಆದರೆ ದೀಪಾವಳಿ ಅಮಾವಾಸ್ಯೆಗೆ ಇದುವರೆಗೆ ಇಷ್ಟೊಂದು ಕಾಣಿಕೆ ಸಂಗ್ರಹವಾಗಿರಲಿಲ್ಲ. ಹೀಗಾಗಿ ಇದುವರೆಗಿನ ದೀಪಾವಳಿ ಜಾತ್ರೆಯಲ್ಲಿ ಇದೇ ಮೊದಲ ಬಾರಿಗೆ ಅತ್ಯಧಿಕ ಕಾಣಿಕೆ ಸಂಗ್ರಹ ಮೊತ್ತವಾಗಿದೆ ಎಂದು ಹೇಳಲಾಗಿದೆ.

ಇನ್ನು ಕಾಣಿಕೆ ಡಬ್ಬಿಯಲ್ಲಿ ನಗದು ಹಣದೊಂದಿಗೆ 45 ಗ್ರಾಂ ಚಿನ್ನ, 2.6 ಕೆಜಿ ಬೆಳ್ಳಿಯೂ ಕಾಣಿಕೆ ರೂಪದಲ್ಲಿ ಮಲೆಮಹದೇಶ್ವರನಿಗೆ ಭಕ್ತರು ಅರ್ಪಿಸಿದ್ದಾರೆ. ಹುಂಡಿ ಎಣಿಕೆಯು ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬಿಗಿ ಬಂದೋಬಸ್ತ್‍ನೊಂದಿಗೆ ಸಾಲೂರು ಮಠದ ಹಿರಿಯ ಶ್ರೀಗಳ ನೇತೃತ್ವದಲ್ಲಿ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು