ಕಾರ್ಗಲ್: ಕಳೆದ ಒಂದು ವಾರದಿಂದ ಸುರಿದ ಮಳೆಗೆ ಲಿಂಗನಮಕ್ಕಿ ಜಲಾಶಯದ ಒಳಹರಿವು ಹೆಚ್ಚಾಗಿದ್ದು ಅಣೆಕಟ್ಟೆಯಲ್ಲಿ ಶೇ 83.85ರಷ್ಟು ಜಲ ಸಂಗ್ರಹವಾಗಿದ್ದು ಮಳೆನೀರಿನಿಂದ ಶರಾವತಿ ಜಲವಿದ್ಯುತ್ ಗಾರದಲ್ಲಿ ಸರಾಸರಿ 1.2 ಕೋಟಿ ಯೂನಿಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ ಎಂದು ಕೆಪಿಸಿ ವಿದ್ಯುತ್ ವಿಭಾಗದ ಮುಖ್ಯ ಎಂಜಿನಿಯರ್ ಚೈತನ್ಯ ಪ್ರಭು ತಿಳಿಸಿದ್ದಾರೆ.
ಪ್ರಸ್ತುತ ಸುರಿಯುತ್ತಿರುವ ಮಳೆ ಪ್ರಮಾಣ, ಜಲಾಶಯದಲ್ಲಿ ಸಂಗ್ರಹವಾದ ನೀರಿನ ಮಟ್ಟ ಹಾಗೂ ಹರಿವಿಕೆಯ ಬಗ್ಗೆ ಸಂಪೂರ್ಣ ಅವಲೋಕನ ಮಾಡಲಾಗುತ್ತಿದೆ. ಮೇಲ್ವಿಚಾರಣೆಗಾಗಿ ಹೆಚ್ಚುವರಿ ಮುಖ್ಯ ಎಂಜಿನಿಯರ್ ಚಂದ್ರಶೇಖರ್ ಅವರನ್ನು ಕೆಪಿಸಿಯ ವ್ಯವಸ್ಥಾಪಕ ನಿರ್ದೇಶಕ ಪೊನ್ನುರಾಜ್ ಅವರನ್ನು ನೇಮಿಸಲಾಗಿದೆ ಎಂದು ಚೈತನ್ಯ ಪ್ರಭು ತಿಳಿಸಿದ್ದಾರೆ.