ಧಾರವಾಡ: ಕಳಸ ಬಂಡೂರಿ ಮತ್ತು ಮಹದಾಯಿ ಯೋಜನೆಯ ತೀರ್ಪು ನಮ್ಮ ಪರವಾಗಿ ಬರಲಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಆ.8ರಂದು ಕಳಸಬಂಡೂರಿ ಹಾಗೂ ಮಹದಾಯಿ ಯೋಜನೆಯ ತೀರ್ಪು ಬರಲಿದೆ. ಕಳಸ ಬಂಡೂರಿ ನಾಲಾ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವನ್ನು ಕಾನೂನು ತಂಡದ ಸಲಹೆ ಮೇರೆಗೆ ರದ್ದುಗೊಳಿಸಲಾಯಿತು. ತೀರ್ಪು ಬಂದ ಬಳಿಕ ಅಲ್ಲಿಗೆ ಹೋಗಿ ಪರಿಶೀಲಿಸುತ್ತೇನೆ ಎಂದು ನಗರದ ಮಲಪ್ರಭಾ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಧ್ಯಮದವರಿಗೆ ತಿಳಿಸಿದರು.
ಬಜೆಟ್ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೂ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.