News Karnataka Kannada
Friday, May 03 2024
ಕರ್ನಾಟಕ

ಮಾಜಿ ಶಾಸಕರ ಮನೆಗೆ ಎನ್ಐಎ ದಾಳಿ

Img 20210804 Wa0044
Photo Credit :

ಉಳ್ಳಾಲ:  ಮಾಜಿ ಶಾಸಕ, ಸಾಹಿತಿ ದಿ.ಇದಿನಬ್ಬ ಪುತ್ರನ ಮನೆಗೆ ಎನ್‌ಐಎ ಬೆಳಂಬೆಳಿಗ್ಗೆ ದಾಳಿ ನಡೆದಿರುವ ಶಂಕೆ ಇದೆ. ಇದಿನಬ್ಬ ಮರಿ ಮೊಮ್ಮಗಳು ಐಸಿಸ್ ಸೇರಿರುವ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.

ಮೂರು ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿರುವ ಇದಿನಬ್ಬರ ಮರಿ ಮೊಮ್ಮಗಳ ಕುಟುಂಬ, ಸದ್ಯ ಎನ್‌ಐಎ ದಾಳಿ ನಡೆಸಿರುವ ಇದಿನಬ್ಬ ಪುತ್ರ ಇಸ್ಮಾಯಿಲ್ ಬಾಷಾರ ಪುತ್ರಿಯ ಮಗಳು ಅಜ್ಮಲ್.

2 ವರ್ಷಗಳ ಹಿಂದೆ ಕಾಸರಗೋಡಿನ 17 ಮಂದಿ ಸಿರಿಯಾದ ಐಸಿಸ್ ಉಗ್ರ ಸಂಘಟನೆ ಸೇರಿದ್ದರು, ಈ 17 ಜನರ ಪೈಕಿ ಇದಿನಬ್ಬ ಪುತ್ರ ಇಸ್ಮಾಯಿಲ್ ಬಾಷಾರ ಮೊಮ್ಮಗಳು ಅಜ್ಮಲ್ ಕುಟುಂಬವೂ ಇತ್ತುಎಂಬ ಶಂಕೆ ವ್ಯಕ್ತವಾಗಿದೆ.ಅಜ್ಮಲ್‌ಳನ್ನ ಕೇರಳ ಮೂಲದ ಎಂಬಿಎ ಪದವೀಧರ ಸಿಯಾಝ್ ಅನ್ನೋನ ಜೊತೆ ವಿವಾಹ ಮಾಡಿ ಕೊಡಲಾಗಿತ್ತು. ವರ್ಷಗಳ ಹಿಂದೆ ಗಂಡ ಸಿಯಾಝ್ ಉನ್ನತ ಶಿಕ್ಷಣಕ್ಕಾಗಿ ಶ್ರೀಲಂಕಾಕ್ಕೆ ಹೋಗುತ್ತಿರುವುದಾಗಿ ಹೇಳಿ ಹೋದವರು ಇಂದಿನವರೆಗೂ ಸಂಪರ್ಕಕ್ಕೆ ಸಿಕ್ಕಿಲ್ಲ.

ಶ್ರೀಲಂಕಾದಿದ ಮಸ್ಕತ್ ಹಾಗೂ ಕತಾರ್ ಗೆ ತೆರಳಿ ಅಲ್ಲಿಂದ ಸಿರಿಯಾಕ್ಕೆ ಹೋಗಿ ಐಸಿಸ್ ಸೇರಿದ್ದಾರೆಂದು ಮಾಹಿತಿ ಇತ್ತು. ವೈದ್ಯರಾಗಿರುವ ಸಿಯಾಝ್‌ನ ಸಹೋದರ ಕೂಡ ಹೆಂಡತಿ ಮತ್ತು ಮಗುವಿನೊಂದಿಗೆ ತೆರಳಿದ್ದ.ಈ ಬಗ್ಗೆ ಕೇರಳ ಆಂತರಿಕ ಭದ್ರತಾ ಹಾಗೂ ಗುಪ್ತಚರ ಇಲಾಖೆ ಹಾಗೂ ರಾಷ್ಟಿçÃಯ ತನಿಖಾ ದಳ ತನಿಖೆ ಆರಂಭಿಸಿತ್ತು, ಅದೇ ತನಿಖೆಯ ಭಾಗವಾಗಿ ಅಜ್ಮಲ್ ಅಜ್ಜ ಇಸ್ಮಾಯಿಲ್ ಬಾಷಾ ಮನೆಗೆ ದಾಳಿ ನಡೆದಿರುವ ಶಂಕೆ ಇದೆ.

ಸಾಹಿತಿಯೂ ಆಗಿದ್ದ ದಿ.ಇದಿನಬ್ಬ ಮೂರು ಬಾರಿ ಕಾಂಗ್ರೆಸ್‌ನಿAದ ಉಳ್ಳಾಲ ಶಾಸಕರಾಗಿ ಆಯ್ಕೆಯಾಗಿದ್ದರು,

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು